ಕರ್ನಾಟಕ ರಾಜ್ಯ ಸರ್ಕಾರ ಪ್ರತೀ ವರ್ಷದಂತೆ ಈ ವರ್ಷವೂ ಸಹ ದಸರಾ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ದಸರಾ ಕ್ರೀಡಾಕೂಟಕ್ಕೆ ದೊಡ್ಡಬಳ್ಳಾಪುರದ ಯೋಗ ಪ್ರತಿಭೆ ಜಿ.ಸಿ ಹೃತಿಕ್ ಆಯ್ಕೆ ಆಗಿದ್ದಾರೆ.
ಯೋಗ ಪ್ರತಿಭೆ ಜಿ.ಸಿ ಹೃತಿಕ್ ಅವರು ನಗರದ ಶ್ರೀ ಮಾರುತಿ ಯೋಗಾಸನ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದು ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಜಿ.ಸಿ ಹೃತಿಕ್ ಅವರು ಶಿವಮೊಗ್ಗದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಯೋಗಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಾಂಪ್ರದಾಯಿಕ ಹಾಗೂ ಕಲಾತ್ಮಕ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದು ಈಗ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಪ್ರಥಮ ಸ್ಥಾನ ಗಳಿಸಿ ದೊಡ್ಡಬಳ್ಳಾಪುರಕ್ಕೆ ಹೆಮ್ಮೆ ತರುವಂತಾಗಲಿ ಎಂದು ಶ್ರೀ ಮಾರುತಿ ಯೋಗಾಸನ ಕೇಂದ್ರದ ತರಬೇತುದಾರ ರಘು.ಎಚ್.ಜಿ, ಸುಗುಣಶ್ರೀ ಹಾಗೂ ಇತರರು ಜಿ.ಸಿ ಹೃತಿಕ್ ಅವರಿಗೆ ಶುಭ ಹಾರೈಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…