Categories: ಬೆಳಗಾವಿ

ರಾಜ್ಯ ಮಹಿಳಾ ಹೋರಾಟಗಾರ್ತಿಗೆ ಲವ್, ಸೆಕ್ಸ್, ದೋಖಾ ಆರೋಪ: ನ್ಯಾಯಕ್ಕಾಗಿ ದೋಖಾ ಮಾಡಿದ ಯೋಧನ ಮನೆ ಮುಂದೆ ರಾಜ್ಯ ಮಹಿಳಾ ಹೋರಾಟಗಾರ್ತಿ ಧರಣಿ

ಓರ್ವ ಸೈನಿಕನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರು ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಮಚ್ಚೆ ಗ್ರಾಮದ ನಿವಾಸಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರು ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ್ ನಲವಡೆ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ.

ಆರು ವರ್ಷದ ಹಿಂದೆ ಫೇಸ್ಬುಕ್​ನಲ್ಲಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರಿಗೆ ಯೋಧ ಅಕ್ಷಯ್ ನಲವಡೆ ಪರಿಚಯವಾಗಿದ್ದ. ತನಗಿಂತ ಹದಿನಾಲ್ಕು ವರ್ಷ ಮೇಲ್ಪಟ್ಟ ಮಹಿಳೆ ಜೊತೆಗೆ ಪ್ರೀತಿ ಮಾಡಿದ್ದ. ಮದುವೆ ಆಗುವುದಾಗಿ ಹೋರಾಟಗಾರ್ತಿಗೆ ನಂಬಿಸಿದ್ದ. ಆರು ವರ್ಷದ ಹಿಂದೆ ಮನೆಯ ದೇವರ ಕೋಣೆ ಮುಂದೆ ಪ್ರಮೋದಾ ಮತ್ತು ಅಕ್ಷಯ್ ಮದುವೆಯಾಗಿದ್ದರು. ಬಳಿಕ ಆತ ಸೇನೆಯಿಂದ ರಜೆಗೆ ಬಂದಾಗ ಹದಿನೈದು ದಿನಗಳ ಕಾಲ ಪ್ರಮೋದಾ ಬಳಿ ಇರುತ್ತಿದ್ದ ಎನ್ನಲಾಗಿದೆ.

ಇದೇ ವೇಳೆ ಅಕ್ಷಯ್​ಗೆ ಒಂಬತ್ತು ಯುವತಿಯರ ಜೊತೆಗೆ ನಂಟಿರುವುದು ಬೆಳಕಿಗೆ ಬಂದಿದೆ. ಅದನ್ನು ಪ್ರಶ್ನೆ ಮಾಡಿದ ಬಳಕ ಎಲ್ಲರನ್ನೂ ಬಿಟ್ಟು ಹೋರಾಟಗಾರ್ತಿ ಪ್ರಮೋದಾ ಹಜಾರೆ ಜೊತೆಗೆ ಇರುವುದಾಗಿ ಅಕ್ಷಯ್ ಹೇಳಿದ್ದ. ಮೊನ್ನೆ ಅಕ್ಷಯ್ ರಜೆಗೆ ಬಂದಾಗ ಬೇರೊಬ್ಬ ಯುವತಿ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ವಿಚಾರ ಗೊತ್ತಾಗಿ ಪ್ರಮೋದಾ ಅಕ್ಷಯ್ ಮನೆಗೆ ಹೋಗಿದ್ದರು. ಹಿರಿಯರು, ಕುಟುಂಬಸ್ಥರು ಕೂಡಿಕೊಂಡು ಸರಿಪಡಿಸುವುದಾಗಿ ಹೇಳಿ ಕಳಿಸಿದ್ದರು. ಬಳಿಕ ಮದುವೆ ಆಗಲ್ಲ ಎಂದು ಅಕ್ಷಯ್ ಉಲ್ಟಾ ಹೊಡೆದಿದ್ದ.

ಇದೀಗ ಅಕ್ಷಯ್ ಇಂದು ಮದುವೆ ಆಗಿದ್ದಾನೆ ಎಂದು ಆತನ ಮನೆಗೆ ಪ್ರಮೋದಾ ಬಂದಿದ್ದಾರೆ. ಆದರೆ, ಅಕ್ಷಯ್ ಕುಟುಂಬಸ್ಥರು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಸಾಯುವವರೆಗೂ ಮ‌ನೆ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ. ಸಾಕಷ್ಟು ಮಹಿಳೆಯರಿಗೆ ನ್ಯಾಯ ಕೊಡಿಸಿದ್ದೇನೆ ತನ್ನ ನೆರವಿಗೆ ಬರುವಂತೆ ಪ್ರಮೋದಾ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

” ಹೊಸ ವರುಷ ಎಂಬುದೇನಿಲ್ಲ ಅರಿತವಗೆ…”

2026ಕ್ಕೆ ಕೆಲವೇ ಗಂಟೆಗಳು ಇರುವಾಗ.......... ಒಂದು ಜೀವನದ ಇಲ್ಲಿಯವರೆಗಿನ ನೆನಪಿನ ಪಯಣ......... " ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ…

3 hours ago

ಪರಿಶಿಷ್ಟರ ಮೇಲಿನ ದೌರ್ಜನ್ಯವನ್ನು ಆಯೋಗ ಸಹಿಸುವುದಿಲ್ಲ-ಡಾ.ಎಲ್ ಮೂರ್ತಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ…

15 hours ago

ಉನ್ನಾವೋ…..

  ಉನ್ನಾವೋ........ ಉನ್ನಾವೋ ಅತ್ಯಾಚಾರ, ಕುಲದೀಪ್ ಸಿಂಗ್ ಸೇಂಗರ್, ದೆಹಲಿ ಹೈಕೋರ್ಟ್ ಜಾಮೀನು ತೀರ್ಪು, ಭಾರತ ನ್ಯಾಯಾಂಗ ವ್ಯವಸ್ಥೆಯ ಕಾರ್ಯ…

16 hours ago

ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಅವಾಜ್… ಬಿತ್ತು ಎಫ್ ಐಆರ್..!

ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು…

17 hours ago

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ…

20 hours ago

ಜ್ಯೂಯಲರಿ ಶಾಪ್ ಮಾಲೀಕರಿಗೆ ಶಾಪ್ ಗಳ ಭದ್ರತೆಗೆ ಬಗ್ಗೆ ಅರಿವು ಮೂಡಿಸಿದ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ…

22 hours ago