Categories: ಬೆಳಗಾವಿ

ರಾಜ್ಯ ಮಹಿಳಾ ಹೋರಾಟಗಾರ್ತಿಗೆ ಲವ್, ಸೆಕ್ಸ್, ದೋಖಾ ಆರೋಪ: ನ್ಯಾಯಕ್ಕಾಗಿ ದೋಖಾ ಮಾಡಿದ ಯೋಧನ ಮನೆ ಮುಂದೆ ರಾಜ್ಯ ಮಹಿಳಾ ಹೋರಾಟಗಾರ್ತಿ ಧರಣಿ

ಓರ್ವ ಸೈನಿಕನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರು ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಮಚ್ಚೆ ಗ್ರಾಮದ ನಿವಾಸಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರು ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ್ ನಲವಡೆ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ.

ಆರು ವರ್ಷದ ಹಿಂದೆ ಫೇಸ್ಬುಕ್​ನಲ್ಲಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರಿಗೆ ಯೋಧ ಅಕ್ಷಯ್ ನಲವಡೆ ಪರಿಚಯವಾಗಿದ್ದ. ತನಗಿಂತ ಹದಿನಾಲ್ಕು ವರ್ಷ ಮೇಲ್ಪಟ್ಟ ಮಹಿಳೆ ಜೊತೆಗೆ ಪ್ರೀತಿ ಮಾಡಿದ್ದ. ಮದುವೆ ಆಗುವುದಾಗಿ ಹೋರಾಟಗಾರ್ತಿಗೆ ನಂಬಿಸಿದ್ದ. ಆರು ವರ್ಷದ ಹಿಂದೆ ಮನೆಯ ದೇವರ ಕೋಣೆ ಮುಂದೆ ಪ್ರಮೋದಾ ಮತ್ತು ಅಕ್ಷಯ್ ಮದುವೆಯಾಗಿದ್ದರು. ಬಳಿಕ ಆತ ಸೇನೆಯಿಂದ ರಜೆಗೆ ಬಂದಾಗ ಹದಿನೈದು ದಿನಗಳ ಕಾಲ ಪ್ರಮೋದಾ ಬಳಿ ಇರುತ್ತಿದ್ದ ಎನ್ನಲಾಗಿದೆ.

ಇದೇ ವೇಳೆ ಅಕ್ಷಯ್​ಗೆ ಒಂಬತ್ತು ಯುವತಿಯರ ಜೊತೆಗೆ ನಂಟಿರುವುದು ಬೆಳಕಿಗೆ ಬಂದಿದೆ. ಅದನ್ನು ಪ್ರಶ್ನೆ ಮಾಡಿದ ಬಳಕ ಎಲ್ಲರನ್ನೂ ಬಿಟ್ಟು ಹೋರಾಟಗಾರ್ತಿ ಪ್ರಮೋದಾ ಹಜಾರೆ ಜೊತೆಗೆ ಇರುವುದಾಗಿ ಅಕ್ಷಯ್ ಹೇಳಿದ್ದ. ಮೊನ್ನೆ ಅಕ್ಷಯ್ ರಜೆಗೆ ಬಂದಾಗ ಬೇರೊಬ್ಬ ಯುವತಿ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ವಿಚಾರ ಗೊತ್ತಾಗಿ ಪ್ರಮೋದಾ ಅಕ್ಷಯ್ ಮನೆಗೆ ಹೋಗಿದ್ದರು. ಹಿರಿಯರು, ಕುಟುಂಬಸ್ಥರು ಕೂಡಿಕೊಂಡು ಸರಿಪಡಿಸುವುದಾಗಿ ಹೇಳಿ ಕಳಿಸಿದ್ದರು. ಬಳಿಕ ಮದುವೆ ಆಗಲ್ಲ ಎಂದು ಅಕ್ಷಯ್ ಉಲ್ಟಾ ಹೊಡೆದಿದ್ದ.

ಇದೀಗ ಅಕ್ಷಯ್ ಇಂದು ಮದುವೆ ಆಗಿದ್ದಾನೆ ಎಂದು ಆತನ ಮನೆಗೆ ಪ್ರಮೋದಾ ಬಂದಿದ್ದಾರೆ. ಆದರೆ, ಅಕ್ಷಯ್ ಕುಟುಂಬಸ್ಥರು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಸಾಯುವವರೆಗೂ ಮ‌ನೆ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ. ಸಾಕಷ್ಟು ಮಹಿಳೆಯರಿಗೆ ನ್ಯಾಯ ಕೊಡಿಸಿದ್ದೇನೆ ತನ್ನ ನೆರವಿಗೆ ಬರುವಂತೆ ಪ್ರಮೋದಾ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…

26 minutes ago

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

19 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

22 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

1 day ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

2 days ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

2 days ago