Categories: ಬೆಳಗಾವಿ

ರಾಜ್ಯ ಮಹಿಳಾ ಹೋರಾಟಗಾರ್ತಿಗೆ ಲವ್, ಸೆಕ್ಸ್, ದೋಖಾ ಆರೋಪ: ನ್ಯಾಯಕ್ಕಾಗಿ ದೋಖಾ ಮಾಡಿದ ಯೋಧನ ಮನೆ ಮುಂದೆ ರಾಜ್ಯ ಮಹಿಳಾ ಹೋರಾಟಗಾರ್ತಿ ಧರಣಿ

ಓರ್ವ ಸೈನಿಕನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರು ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಮಚ್ಚೆ ಗ್ರಾಮದ ನಿವಾಸಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರು ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ್ ನಲವಡೆ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ.

ಆರು ವರ್ಷದ ಹಿಂದೆ ಫೇಸ್ಬುಕ್​ನಲ್ಲಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರಿಗೆ ಯೋಧ ಅಕ್ಷಯ್ ನಲವಡೆ ಪರಿಚಯವಾಗಿದ್ದ. ತನಗಿಂತ ಹದಿನಾಲ್ಕು ವರ್ಷ ಮೇಲ್ಪಟ್ಟ ಮಹಿಳೆ ಜೊತೆಗೆ ಪ್ರೀತಿ ಮಾಡಿದ್ದ. ಮದುವೆ ಆಗುವುದಾಗಿ ಹೋರಾಟಗಾರ್ತಿಗೆ ನಂಬಿಸಿದ್ದ. ಆರು ವರ್ಷದ ಹಿಂದೆ ಮನೆಯ ದೇವರ ಕೋಣೆ ಮುಂದೆ ಪ್ರಮೋದಾ ಮತ್ತು ಅಕ್ಷಯ್ ಮದುವೆಯಾಗಿದ್ದರು. ಬಳಿಕ ಆತ ಸೇನೆಯಿಂದ ರಜೆಗೆ ಬಂದಾಗ ಹದಿನೈದು ದಿನಗಳ ಕಾಲ ಪ್ರಮೋದಾ ಬಳಿ ಇರುತ್ತಿದ್ದ ಎನ್ನಲಾಗಿದೆ.

ಇದೇ ವೇಳೆ ಅಕ್ಷಯ್​ಗೆ ಒಂಬತ್ತು ಯುವತಿಯರ ಜೊತೆಗೆ ನಂಟಿರುವುದು ಬೆಳಕಿಗೆ ಬಂದಿದೆ. ಅದನ್ನು ಪ್ರಶ್ನೆ ಮಾಡಿದ ಬಳಕ ಎಲ್ಲರನ್ನೂ ಬಿಟ್ಟು ಹೋರಾಟಗಾರ್ತಿ ಪ್ರಮೋದಾ ಹಜಾರೆ ಜೊತೆಗೆ ಇರುವುದಾಗಿ ಅಕ್ಷಯ್ ಹೇಳಿದ್ದ. ಮೊನ್ನೆ ಅಕ್ಷಯ್ ರಜೆಗೆ ಬಂದಾಗ ಬೇರೊಬ್ಬ ಯುವತಿ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ವಿಚಾರ ಗೊತ್ತಾಗಿ ಪ್ರಮೋದಾ ಅಕ್ಷಯ್ ಮನೆಗೆ ಹೋಗಿದ್ದರು. ಹಿರಿಯರು, ಕುಟುಂಬಸ್ಥರು ಕೂಡಿಕೊಂಡು ಸರಿಪಡಿಸುವುದಾಗಿ ಹೇಳಿ ಕಳಿಸಿದ್ದರು. ಬಳಿಕ ಮದುವೆ ಆಗಲ್ಲ ಎಂದು ಅಕ್ಷಯ್ ಉಲ್ಟಾ ಹೊಡೆದಿದ್ದ.

ಇದೀಗ ಅಕ್ಷಯ್ ಇಂದು ಮದುವೆ ಆಗಿದ್ದಾನೆ ಎಂದು ಆತನ ಮನೆಗೆ ಪ್ರಮೋದಾ ಬಂದಿದ್ದಾರೆ. ಆದರೆ, ಅಕ್ಷಯ್ ಕುಟುಂಬಸ್ಥರು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಸಾಯುವವರೆಗೂ ಮ‌ನೆ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ. ಸಾಕಷ್ಟು ಮಹಿಳೆಯರಿಗೆ ನ್ಯಾಯ ಕೊಡಿಸಿದ್ದೇನೆ ತನ್ನ ನೆರವಿಗೆ ಬರುವಂತೆ ಪ್ರಮೋದಾ ಮನವಿ ಮಾಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

47 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago