ಓರ್ವ ಸೈನಿಕನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರು ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ನಗರದ ಮಚ್ಚೆ ಗ್ರಾಮದ ನಿವಾಸಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರು ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ್ ನಲವಡೆ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ.
ಆರು ವರ್ಷದ ಹಿಂದೆ ಫೇಸ್ಬುಕ್ನಲ್ಲಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರಿಗೆ ಯೋಧ ಅಕ್ಷಯ್ ನಲವಡೆ ಪರಿಚಯವಾಗಿದ್ದ. ತನಗಿಂತ ಹದಿನಾಲ್ಕು ವರ್ಷ ಮೇಲ್ಪಟ್ಟ ಮಹಿಳೆ ಜೊತೆಗೆ ಪ್ರೀತಿ ಮಾಡಿದ್ದ. ಮದುವೆ ಆಗುವುದಾಗಿ ಹೋರಾಟಗಾರ್ತಿಗೆ ನಂಬಿಸಿದ್ದ. ಆರು ವರ್ಷದ ಹಿಂದೆ ಮನೆಯ ದೇವರ ಕೋಣೆ ಮುಂದೆ ಪ್ರಮೋದಾ ಮತ್ತು ಅಕ್ಷಯ್ ಮದುವೆಯಾಗಿದ್ದರು. ಬಳಿಕ ಆತ ಸೇನೆಯಿಂದ ರಜೆಗೆ ಬಂದಾಗ ಹದಿನೈದು ದಿನಗಳ ಕಾಲ ಪ್ರಮೋದಾ ಬಳಿ ಇರುತ್ತಿದ್ದ ಎನ್ನಲಾಗಿದೆ.
ಇದೇ ವೇಳೆ ಅಕ್ಷಯ್ಗೆ ಒಂಬತ್ತು ಯುವತಿಯರ ಜೊತೆಗೆ ನಂಟಿರುವುದು ಬೆಳಕಿಗೆ ಬಂದಿದೆ. ಅದನ್ನು ಪ್ರಶ್ನೆ ಮಾಡಿದ ಬಳಕ ಎಲ್ಲರನ್ನೂ ಬಿಟ್ಟು ಹೋರಾಟಗಾರ್ತಿ ಪ್ರಮೋದಾ ಹಜಾರೆ ಜೊತೆಗೆ ಇರುವುದಾಗಿ ಅಕ್ಷಯ್ ಹೇಳಿದ್ದ. ಮೊನ್ನೆ ಅಕ್ಷಯ್ ರಜೆಗೆ ಬಂದಾಗ ಬೇರೊಬ್ಬ ಯುವತಿ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ವಿಚಾರ ಗೊತ್ತಾಗಿ ಪ್ರಮೋದಾ ಅಕ್ಷಯ್ ಮನೆಗೆ ಹೋಗಿದ್ದರು. ಹಿರಿಯರು, ಕುಟುಂಬಸ್ಥರು ಕೂಡಿಕೊಂಡು ಸರಿಪಡಿಸುವುದಾಗಿ ಹೇಳಿ ಕಳಿಸಿದ್ದರು. ಬಳಿಕ ಮದುವೆ ಆಗಲ್ಲ ಎಂದು ಅಕ್ಷಯ್ ಉಲ್ಟಾ ಹೊಡೆದಿದ್ದ.
ಇದೀಗ ಅಕ್ಷಯ್ ಇಂದು ಮದುವೆ ಆಗಿದ್ದಾನೆ ಎಂದು ಆತನ ಮನೆಗೆ ಪ್ರಮೋದಾ ಬಂದಿದ್ದಾರೆ. ಆದರೆ, ಅಕ್ಷಯ್ ಕುಟುಂಬಸ್ಥರು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಸಾಯುವವರೆಗೂ ಮನೆ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ. ಸಾಕಷ್ಟು ಮಹಿಳೆಯರಿಗೆ ನ್ಯಾಯ ಕೊಡಿಸಿದ್ದೇನೆ ತನ್ನ ನೆರವಿಗೆ ಬರುವಂತೆ ಪ್ರಮೋದಾ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…