Categories: ಬೆಳಗಾವಿ

ರಾಜ್ಯ ಮಹಿಳಾ ಹೋರಾಟಗಾರ್ತಿಗೆ ಲವ್, ಸೆಕ್ಸ್, ದೋಖಾ ಆರೋಪ: ನ್ಯಾಯಕ್ಕಾಗಿ ದೋಖಾ ಮಾಡಿದ ಯೋಧನ ಮನೆ ಮುಂದೆ ರಾಜ್ಯ ಮಹಿಳಾ ಹೋರಾಟಗಾರ್ತಿ ಧರಣಿ

ಓರ್ವ ಸೈನಿಕನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರು ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಮಚ್ಚೆ ಗ್ರಾಮದ ನಿವಾಸಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರು ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ್ ನಲವಡೆ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ.

ಆರು ವರ್ಷದ ಹಿಂದೆ ಫೇಸ್ಬುಕ್​ನಲ್ಲಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರಿಗೆ ಯೋಧ ಅಕ್ಷಯ್ ನಲವಡೆ ಪರಿಚಯವಾಗಿದ್ದ. ತನಗಿಂತ ಹದಿನಾಲ್ಕು ವರ್ಷ ಮೇಲ್ಪಟ್ಟ ಮಹಿಳೆ ಜೊತೆಗೆ ಪ್ರೀತಿ ಮಾಡಿದ್ದ. ಮದುವೆ ಆಗುವುದಾಗಿ ಹೋರಾಟಗಾರ್ತಿಗೆ ನಂಬಿಸಿದ್ದ. ಆರು ವರ್ಷದ ಹಿಂದೆ ಮನೆಯ ದೇವರ ಕೋಣೆ ಮುಂದೆ ಪ್ರಮೋದಾ ಮತ್ತು ಅಕ್ಷಯ್ ಮದುವೆಯಾಗಿದ್ದರು. ಬಳಿಕ ಆತ ಸೇನೆಯಿಂದ ರಜೆಗೆ ಬಂದಾಗ ಹದಿನೈದು ದಿನಗಳ ಕಾಲ ಪ್ರಮೋದಾ ಬಳಿ ಇರುತ್ತಿದ್ದ ಎನ್ನಲಾಗಿದೆ.

ಇದೇ ವೇಳೆ ಅಕ್ಷಯ್​ಗೆ ಒಂಬತ್ತು ಯುವತಿಯರ ಜೊತೆಗೆ ನಂಟಿರುವುದು ಬೆಳಕಿಗೆ ಬಂದಿದೆ. ಅದನ್ನು ಪ್ರಶ್ನೆ ಮಾಡಿದ ಬಳಕ ಎಲ್ಲರನ್ನೂ ಬಿಟ್ಟು ಹೋರಾಟಗಾರ್ತಿ ಪ್ರಮೋದಾ ಹಜಾರೆ ಜೊತೆಗೆ ಇರುವುದಾಗಿ ಅಕ್ಷಯ್ ಹೇಳಿದ್ದ. ಮೊನ್ನೆ ಅಕ್ಷಯ್ ರಜೆಗೆ ಬಂದಾಗ ಬೇರೊಬ್ಬ ಯುವತಿ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ವಿಚಾರ ಗೊತ್ತಾಗಿ ಪ್ರಮೋದಾ ಅಕ್ಷಯ್ ಮನೆಗೆ ಹೋಗಿದ್ದರು. ಹಿರಿಯರು, ಕುಟುಂಬಸ್ಥರು ಕೂಡಿಕೊಂಡು ಸರಿಪಡಿಸುವುದಾಗಿ ಹೇಳಿ ಕಳಿಸಿದ್ದರು. ಬಳಿಕ ಮದುವೆ ಆಗಲ್ಲ ಎಂದು ಅಕ್ಷಯ್ ಉಲ್ಟಾ ಹೊಡೆದಿದ್ದ.

ಇದೀಗ ಅಕ್ಷಯ್ ಇಂದು ಮದುವೆ ಆಗಿದ್ದಾನೆ ಎಂದು ಆತನ ಮನೆಗೆ ಪ್ರಮೋದಾ ಬಂದಿದ್ದಾರೆ. ಆದರೆ, ಅಕ್ಷಯ್ ಕುಟುಂಬಸ್ಥರು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಸಾಯುವವರೆಗೂ ಮ‌ನೆ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ. ಸಾಕಷ್ಟು ಮಹಿಳೆಯರಿಗೆ ನ್ಯಾಯ ಕೊಡಿಸಿದ್ದೇನೆ ತನ್ನ ನೆರವಿಗೆ ಬರುವಂತೆ ಪ್ರಮೋದಾ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

41 minutes ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

7 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

7 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

20 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

21 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

23 hours ago