ಓರ್ವ ಸೈನಿಕನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರು ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ನಗರದ ಮಚ್ಚೆ ಗ್ರಾಮದ ನಿವಾಸಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರು ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ್ ನಲವಡೆ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ.
ಆರು ವರ್ಷದ ಹಿಂದೆ ಫೇಸ್ಬುಕ್ನಲ್ಲಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರಿಗೆ ಯೋಧ ಅಕ್ಷಯ್ ನಲವಡೆ ಪರಿಚಯವಾಗಿದ್ದ. ತನಗಿಂತ ಹದಿನಾಲ್ಕು ವರ್ಷ ಮೇಲ್ಪಟ್ಟ ಮಹಿಳೆ ಜೊತೆಗೆ ಪ್ರೀತಿ ಮಾಡಿದ್ದ. ಮದುವೆ ಆಗುವುದಾಗಿ ಹೋರಾಟಗಾರ್ತಿಗೆ ನಂಬಿಸಿದ್ದ. ಆರು ವರ್ಷದ ಹಿಂದೆ ಮನೆಯ ದೇವರ ಕೋಣೆ ಮುಂದೆ ಪ್ರಮೋದಾ ಮತ್ತು ಅಕ್ಷಯ್ ಮದುವೆಯಾಗಿದ್ದರು. ಬಳಿಕ ಆತ ಸೇನೆಯಿಂದ ರಜೆಗೆ ಬಂದಾಗ ಹದಿನೈದು ದಿನಗಳ ಕಾಲ ಪ್ರಮೋದಾ ಬಳಿ ಇರುತ್ತಿದ್ದ ಎನ್ನಲಾಗಿದೆ.
ಇದೇ ವೇಳೆ ಅಕ್ಷಯ್ಗೆ ಒಂಬತ್ತು ಯುವತಿಯರ ಜೊತೆಗೆ ನಂಟಿರುವುದು ಬೆಳಕಿಗೆ ಬಂದಿದೆ. ಅದನ್ನು ಪ್ರಶ್ನೆ ಮಾಡಿದ ಬಳಕ ಎಲ್ಲರನ್ನೂ ಬಿಟ್ಟು ಹೋರಾಟಗಾರ್ತಿ ಪ್ರಮೋದಾ ಹಜಾರೆ ಜೊತೆಗೆ ಇರುವುದಾಗಿ ಅಕ್ಷಯ್ ಹೇಳಿದ್ದ. ಮೊನ್ನೆ ಅಕ್ಷಯ್ ರಜೆಗೆ ಬಂದಾಗ ಬೇರೊಬ್ಬ ಯುವತಿ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ವಿಚಾರ ಗೊತ್ತಾಗಿ ಪ್ರಮೋದಾ ಅಕ್ಷಯ್ ಮನೆಗೆ ಹೋಗಿದ್ದರು. ಹಿರಿಯರು, ಕುಟುಂಬಸ್ಥರು ಕೂಡಿಕೊಂಡು ಸರಿಪಡಿಸುವುದಾಗಿ ಹೇಳಿ ಕಳಿಸಿದ್ದರು. ಬಳಿಕ ಮದುವೆ ಆಗಲ್ಲ ಎಂದು ಅಕ್ಷಯ್ ಉಲ್ಟಾ ಹೊಡೆದಿದ್ದ.
ಇದೀಗ ಅಕ್ಷಯ್ ಇಂದು ಮದುವೆ ಆಗಿದ್ದಾನೆ ಎಂದು ಆತನ ಮನೆಗೆ ಪ್ರಮೋದಾ ಬಂದಿದ್ದಾರೆ. ಆದರೆ, ಅಕ್ಷಯ್ ಕುಟುಂಬಸ್ಥರು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಸಾಯುವವರೆಗೂ ಮನೆ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ. ಸಾಕಷ್ಟು ಮಹಿಳೆಯರಿಗೆ ನ್ಯಾಯ ಕೊಡಿಸಿದ್ದೇನೆ ತನ್ನ ನೆರವಿಗೆ ಬರುವಂತೆ ಪ್ರಮೋದಾ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…