ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವದಂತಿಗಳು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ.
ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸರಣಿ ಸಭೆಗಳ ಬೆನ್ನಲ್ಲೇ ಈ ಚರ್ಚೆಗಳು ಮತ್ತಷ್ಟು ವೇಗ ಪಡೆದುಕೊಂಡಿವೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದ ಬಳಿಕ, ಅಧಿಕಾರ ಹಂಚಿಕೆಯ ಸೂತ್ರದಡಿ ಎರಡೂವರೆ ವರ್ಷಗಳ ನಂತರ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡುವ ಬಗ್ಗೆ ಆಂತರಿಕ ಒಪ್ಪಂದ ನಡೆದಿತ್ತು ಎನ್ನಲಾಗುತ್ತಿದೆ. ಈಗ ಆ ಅವಧಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ಚುರುಕುಗೊಂಡಿದ್ದು, ಡಿಕೆಶಿ ಹೆಸರೇ ಬಹುತೇಕ ಅಂತಿಮವಾಗಿದೆ ಎಂಬ ನಂಬಿಕೆ ಕಾರ್ಯಕರ್ತರಲ್ಲಿ ಬಲಪಡುತ್ತಿದೆ.
ಆದರೆ, ಈ ಕುರಿತು ಕಾಂಗ್ರೆಸ್ ಹೈಕಮಾಂಡ್ನಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಬಣಗಳ ನಡುವಿನ ರಾಜಕೀಯ ಚಟುವಟಿಕೆಗಳು ಕುತೂಹಲ ಕೆರಳಿಸಿದ್ದು, ಅಂತಿಮ ತೀರ್ಮಾನಕ್ಕಾಗಿ ರಾಜ್ಯ ರಾಜಕೀಯ ಕಾದುನೋಡುವ ಸ್ಥಿತಿಯಲ್ಲಿದೆ. ಹೈಕಮಾಂಡ್ ಅಧಿಕೃತ ನಿರ್ಧಾರ ಪ್ರಕಟಿಸುವವರೆಗೆ ಯಾವುದೇ ಸಂಭ್ರಮಾಚರಣೆ ಮಾಡಬಾರದು ಎಂದು ಪಕ್ಷದ ಹಿರಿಯ ನಾಯಕರು ಕಾರ್ಯಕರ್ತರಿಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.
ಇದೀಗ ಮೇ 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ನಿರ್ಧಾರ ಪ್ರಕಟಿಸಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದ್ದಂತೆ, ರಾಜ್ಯದ ಹಲವು ಭಾಗಗಳಲ್ಲಿ ಡಿ.ಕೆ ಶಿವಕುಮಾರ್ ಬೆಂಬಲಿಗರು ವಿಜಯೋತ್ಸವ ಆರಂಭಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂಭಾಗ, ರಾಮನಗರ, ಕನಕಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.
‘ಮುಂದಿನ ಸಿಎಂ ಡಿ.ಕೆ. ಶಿವಕುಮಾರ್’ ಎಂಬ ಪೋಸ್ಟರ್ಗಳು, ಬ್ಯಾನರ್ಗಳು ಮತ್ತು ಸಾಮಾಜಿಕ ಜಾಲತಾಣ ಪೋಸ್ಟ್ಗಳು ವೈರಲ್ ಆಗುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಹೈವೋಲ್ಟೇಜ್ ವಾತಾವರಣ ನಿರ್ಮಾಣವಾಗಿದೆ. ಆದರೆ ಅಧಿಕೃತ ಘೋಷಣೆ ಇನ್ನೂ ಹೊರಬೀಳದಿರುವುದರಿಂದ, ಈ ಎಲ್ಲ ಬೆಳವಣಿಗೆಗಳು ರಾಜಕೀಯ ವದಂತಿಗಳ ಹಂತದಲ್ಲೇ ಉಳಿದಿವೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…