ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯಗಳು ಈ ಕೆಳಕಂಡಂತಿವೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಎಲ್ಲಾ ಸಗಟು ಗೋದಾಮುಗಳಿಗೆ ರೂ. 12 ಕೋಟಿ ವೆಚ್ಚದಲ್ಲಿ ಸಿ.ಸಿ.ಟಿ.ವಿ ಅಳವಡಿಕೆಗೆ ಕೆ.ಟಿ.ಟಿ.ಪಿ ಕಾಯ್ದೆಯನ್ವಯ ಟೆಂಡರ್ ಕರೆಯಲು ನಿರ್ಧಾರ.

* ರೂ. 44 ಕೋಟಿ ವೆಚ್ಚದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಲೋಕಲ್ ಪ್ಲಾನಿಂಗ್ ಏರಿಯಾ ವ್ಯಾಪ್ತಿಯಲ್ಲಿನ ನಂಜನಗೂಡು ತಾಲ್ಲೂಕು ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ ಗ್ರಾಮಗಳ ಅಭಿವೃದ್ಧಿ ಕಾರ್ಯಗಳು ಮತ್ತು ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಅನುಷ್ಠಾನಕ್ಕೆ ತೀರ್ಮಾನ.

* ಗದಗ – ಬೆಟಗೇರಿ ನಗರಸಭೆಗೆ ಅಮೃತ 2.0 ಯೋಜನೆಯಡಿ ಅಂದಾಜು ರೂ. 34 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಕ್ಕೆ ಅನುಮತಿ.

* 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದ ಆಯ್ದ 17 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಸರ ಪರಿಹಾರ ನಿಧಿಯಡಿ ರೂ. 750 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಾಣ ಹಾಗೂ ಉನ್ನತೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.

* ಪ್ರಸಕ್ತ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ರೂ. 36 ಕೋಟಿ ಅಂದಾಜು ವೆಚ್ಚದಲ್ಲಿ 4,000 ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧಾರ.

* ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ 4 ಲಕ್ಷ ಮೆಟ್ರಿಕ್ ಟನ್ ರಾಗಿ ಸಂಗ್ರಹಿಸಲು ಅಗತ್ಯವಿರುವ 80 ಲಕ್ಷ ಗೋಣಿಚೀಲಗಳ ಖರೀದಿಗೆ ರೂ. 76 ಕೋಟಿ ಅನುದಾನ ಒದಗಿಸಲು ಸಮ್ಮತಿ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

5 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

9 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago