Categories: ಕೋಲಾರ

ರಾಜ್ಯ ಸರಕಾರದಲ್ಲಿ ಅನುದಾನಕ್ಕೆ ಕೊರತೆಯಿಲ್ಲ: ಅಭಿವೃದ್ಧಿಗೆ ಆದ್ಯತೆ : ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ನಮಗೆ ಅನುದಾನಕ್ಕೆ ಏನು ಕೊರತೆಯಿಲ್ಲ. ಎಷ್ಟೇ ಅನುದಾನ ಬೇಕಾದರೂ ತಂದು ಅಭಿವೃದ್ದಿ ಮಾಡಲು ಬದ್ದರಾಗಿದ್ದೇವೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ತಾಲೂಕಿನ ವೇಮಗಲ್-ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ಮುಖ್ಯಮಂತ್ರಿಗಳ ನಗರೋತ್ಥಾನ -4 ರ ಅಡಿಯಲ್ಲಿ ವಿವಿಧ ಕಾಮಗಾರಿಗಳು ಸೇರಿದಂತೆ ಇಂದಿರಾ ಕ್ಯಾಂಟೀನ್ ಗುದ್ದಲಿ ಪೂಜೆ, ಎಸ್ ಎಫ್ ಸಿ ಮುಕ್ತ ನಿಧಿ ಯೋಜನೆಯಲ್ಲಿ 136 ಮಕ್ಕಳಿಗೆ ಸಹಾಯ ಧನ ಹಾಗೂ ಪೌರ ಕಾರ್ಮಿಕರಿಗೆ ಮತ್ತು ಜಲಗಾರರಿಗೆ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದ ಅವರು, ನರಸಾಪುರ ಮತ್ತು ವೇಮಗಲ್ ಈಗಾಗಲೇ ಕೈಗಾರಿಕಾ ಪ್ರದೇಶವಾಗಿದ್ದು, ಇಲ್ಲಿ ಹೆಚ್ಚಿನ ಜನಸಂಖ್ಯೆ ಇದೆ. ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಕ್ಷೇತ್ರದ ಜನರಿಗೆ ಬೆಳಕಾಗುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕೆಲಸ ಕೊಡುವ ನಮ್ಮ ಉದ್ದೇಶವಾಗಿದೆ ಎಂದರು.

ಜನಸಂಖ್ಯೆಯು ಹೆಚ್ಚಾದಂತೆ ಅಧಿಕಾರಿಗಳಿಗೆ ಕೆಲಸದ ಒತ್ತಡವನ್ನು ಕಡಿಮೆಯಾಗುವಂತೆ ಮಾಡಲು ವೇಮಗಲ್ ನರಸಾಪುರವನ್ನು ಅವಳಿ ಪುರಸಭೆಯಾಗಿ ಮಾಡಿ, ವೇಮಗಲ್ ತಾಲೂಕು ಕೇಂದ್ರವನ್ನಾಗಿ ಮಾಡಲು ಸರಕಾರ ಈಗಾಗಲೇ ಚಿಂತನೆ ನಡೆಸಿದ್ದು, ಆದಷ್ಟು ಶೀಘ್ರವಾಗಿ ಸರಕಾರ ಕಾನೂನು ಪ್ರಕಾರವೇ ಜಾರಿ ಮಾಡಲಿದೆ. ಆಯಾ ಭಾಗದ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ಕುಂದುಕೊರತೆಯನ್ನು ಬಗೆಹರಿಸಲು ವಾರದಲ್ಲಿ ಎರಡು ದಿನ ಗ್ರಾಪಂ ಮಟ್ಟದಲ್ಲಿ ಜನ ಸಂಪರ್ಕ ಸಭೆಗಳನ್ನು ನಡೆಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಅಧಿಕಾರಿಗಳಿಂದ ಉತ್ತರ ಹಾಗೂ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಗಳಿಗೆ ಕೇವಲ ನರೇಗಾದಲ್ಲಿ ಮಾತ್ರ ಅನುದಾನ ಬರುತ್ತದೆ. ಆದರೆ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆಯಾದರೆ ವಿವಿಧ ಮೂಲಗಳಿಂದ ಸರಕಾರಗಳಿಂದ ಅನುದಾನವನ್ನು ಪಡೆಯಬಹುದು. ಈಗಾಗಲೇ ವೇಮಗಲ್-ಕುರಗಲ್ ಪಟ್ಟಣ ಪಂಚಾಯತಿ ಅಭಿವೃದ್ಧಿಗೆ ಸರಕಾರ 20 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಮುತುವರ್ಜಿಯಿಂದ ಈಗಾಗಲೇ ಸರ್ಕಾರದೊಂದಿಗೆ ಮಾತನಾಡಿ ವೇಮಗಲ್ ತಾಲೂಕು ಕೇಂದ್ರ ಮಾಡಿ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ತಯಾರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಯೋಜನೆಗಳನ್ನು ತಲುಪಿಸುವ ಜೊತೆಗೆ ಕ್ಷೇತ್ರದಲ್ಲಿ ಆದ್ಯತೆ ಮೇರೆಗೆ ಮೂಲಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿಯಲ್ಲಿ ಮಾದರಿಯಾಗುವಂತೆ ಮಾಡುವುದು ಕಾಂಗ್ರೆಸ್ ಸರಕಾರದ ಗುರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ವೇಮಗಲ್ ಪಟ್ಟಣ ಪಂಚಾಯತಿಯಾಗಿ ಎರಡು ವರ್ಷವಾಗಿದ್ದು ಕೆಲವು ಕಾನೂನು ತೊಡಕುಗಳನ್ನು ಸರಿಪಡಿಸಿ ಕೂಡಲೇ ಚುನಾವಣೆ ನಡೆಸಿ ಜನರ ಅಭಿವೃದ್ಧಿಗೆ ಕ್ರಮ ವಹಿಸಬೇಕು. ಸರಕಾರ ಬಂದಾಗಿನಿಂದ ಗ್ಯಾರಂಟಿಗಳು ಜಾರಿಯಲ್ಲಿತ್ತು. ಸಾಮಾನ ಜನರ ದೃಷ್ಟಿಯಿಂದ ಆಡಳಿತ ಸುಧಾರಣೆಯಾಗುವಂತೆ ಮಾಡಬೇಕು ಭವಿಷ್ಯದಲ್ಲಿ ವೇಮಗಲ್ ಹೋಬಳಿಯನ್ನು ತಾಲೂಕು ಮಾಡಿ ಜನರಿಗೆ ಅನುಕೂಲವಾಗುವಂತೆ ಮಾಡಬೇಕು. ಅಭಿವೃದ್ಧಿ ವಿಚಾರದಲ್ಲಿ ಸದಾ ಸರಕಾರ ಮತ್ತು ಜನಪ್ರತಿನಿಧಿಗಳಿಗೆ ಮನವರಿಕೆ ಮಾಡುವುದು ನನ್ನ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ವೇಮಗಲ್ ಪಟ್ಟಣ ಪಂಚಾಯತಿ ಆಡಳಿತಾಧಿಕಾರಿ ಹಾಗೂ ತಹಶಿಲ್ದಾರ್ ಹರ್ಷವರ್ಧನ್, ತಾಪಂ ಮಾಜಿ ಅಧ್ಯಕ್ಷರಾದ ಉದಯಶಂಕರ್, ಮುನಿಯಪ್ಪ, ಮುಖಂಡರಾದ ನಾಗನಾಳ ಸೋಮಣ್ಣ, ಗದ್ದೆಕಣ್ಣೂರು ದಯಾನಂದ್, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಚಂಜಿಮಲೆ ರಮೇಶ್, ವೆಂಕಟೇಶ್, ಸಿಎಂಎಂ ಮಂಜು, ಖಾಜಿಕಲ್ಲಹಳ್ಳಿ ಮುನಿರಾಜು, ನಾಗರಾಜ್, ಜರೀನ ತಾಜ್, ರವಿಕುಮಾರ್, ಪರ್ಜೇನಹಳ್ಳಿ ನಾಗೇಶ್, ಮುಂತಾದವರು ಇದ್ದರು

Ramesh Babu

Journalist

Recent Posts

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

11 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

12 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

1 day ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

1 day ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

1 day ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

1 day ago