Categories: ಕೋಲಾರ

ರಾಜ್ಯ ಸರಕಾರದಲ್ಲಿ ಅನುದಾನಕ್ಕೆ ಕೊರತೆಯಿಲ್ಲ: ಅಭಿವೃದ್ಧಿಗೆ ಆದ್ಯತೆ : ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ನಮಗೆ ಅನುದಾನಕ್ಕೆ ಏನು ಕೊರತೆಯಿಲ್ಲ. ಎಷ್ಟೇ ಅನುದಾನ ಬೇಕಾದರೂ ತಂದು ಅಭಿವೃದ್ದಿ ಮಾಡಲು ಬದ್ದರಾಗಿದ್ದೇವೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ತಾಲೂಕಿನ ವೇಮಗಲ್-ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ಮುಖ್ಯಮಂತ್ರಿಗಳ ನಗರೋತ್ಥಾನ -4 ರ ಅಡಿಯಲ್ಲಿ ವಿವಿಧ ಕಾಮಗಾರಿಗಳು ಸೇರಿದಂತೆ ಇಂದಿರಾ ಕ್ಯಾಂಟೀನ್ ಗುದ್ದಲಿ ಪೂಜೆ, ಎಸ್ ಎಫ್ ಸಿ ಮುಕ್ತ ನಿಧಿ ಯೋಜನೆಯಲ್ಲಿ 136 ಮಕ್ಕಳಿಗೆ ಸಹಾಯ ಧನ ಹಾಗೂ ಪೌರ ಕಾರ್ಮಿಕರಿಗೆ ಮತ್ತು ಜಲಗಾರರಿಗೆ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದ ಅವರು, ನರಸಾಪುರ ಮತ್ತು ವೇಮಗಲ್ ಈಗಾಗಲೇ ಕೈಗಾರಿಕಾ ಪ್ರದೇಶವಾಗಿದ್ದು, ಇಲ್ಲಿ ಹೆಚ್ಚಿನ ಜನಸಂಖ್ಯೆ ಇದೆ. ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಕ್ಷೇತ್ರದ ಜನರಿಗೆ ಬೆಳಕಾಗುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕೆಲಸ ಕೊಡುವ ನಮ್ಮ ಉದ್ದೇಶವಾಗಿದೆ ಎಂದರು.

ಜನಸಂಖ್ಯೆಯು ಹೆಚ್ಚಾದಂತೆ ಅಧಿಕಾರಿಗಳಿಗೆ ಕೆಲಸದ ಒತ್ತಡವನ್ನು ಕಡಿಮೆಯಾಗುವಂತೆ ಮಾಡಲು ವೇಮಗಲ್ ನರಸಾಪುರವನ್ನು ಅವಳಿ ಪುರಸಭೆಯಾಗಿ ಮಾಡಿ, ವೇಮಗಲ್ ತಾಲೂಕು ಕೇಂದ್ರವನ್ನಾಗಿ ಮಾಡಲು ಸರಕಾರ ಈಗಾಗಲೇ ಚಿಂತನೆ ನಡೆಸಿದ್ದು, ಆದಷ್ಟು ಶೀಘ್ರವಾಗಿ ಸರಕಾರ ಕಾನೂನು ಪ್ರಕಾರವೇ ಜಾರಿ ಮಾಡಲಿದೆ. ಆಯಾ ಭಾಗದ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ಕುಂದುಕೊರತೆಯನ್ನು ಬಗೆಹರಿಸಲು ವಾರದಲ್ಲಿ ಎರಡು ದಿನ ಗ್ರಾಪಂ ಮಟ್ಟದಲ್ಲಿ ಜನ ಸಂಪರ್ಕ ಸಭೆಗಳನ್ನು ನಡೆಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಅಧಿಕಾರಿಗಳಿಂದ ಉತ್ತರ ಹಾಗೂ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಗಳಿಗೆ ಕೇವಲ ನರೇಗಾದಲ್ಲಿ ಮಾತ್ರ ಅನುದಾನ ಬರುತ್ತದೆ. ಆದರೆ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆಯಾದರೆ ವಿವಿಧ ಮೂಲಗಳಿಂದ ಸರಕಾರಗಳಿಂದ ಅನುದಾನವನ್ನು ಪಡೆಯಬಹುದು. ಈಗಾಗಲೇ ವೇಮಗಲ್-ಕುರಗಲ್ ಪಟ್ಟಣ ಪಂಚಾಯತಿ ಅಭಿವೃದ್ಧಿಗೆ ಸರಕಾರ 20 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಮುತುವರ್ಜಿಯಿಂದ ಈಗಾಗಲೇ ಸರ್ಕಾರದೊಂದಿಗೆ ಮಾತನಾಡಿ ವೇಮಗಲ್ ತಾಲೂಕು ಕೇಂದ್ರ ಮಾಡಿ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ತಯಾರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಯೋಜನೆಗಳನ್ನು ತಲುಪಿಸುವ ಜೊತೆಗೆ ಕ್ಷೇತ್ರದಲ್ಲಿ ಆದ್ಯತೆ ಮೇರೆಗೆ ಮೂಲಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿಯಲ್ಲಿ ಮಾದರಿಯಾಗುವಂತೆ ಮಾಡುವುದು ಕಾಂಗ್ರೆಸ್ ಸರಕಾರದ ಗುರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ವೇಮಗಲ್ ಪಟ್ಟಣ ಪಂಚಾಯತಿಯಾಗಿ ಎರಡು ವರ್ಷವಾಗಿದ್ದು ಕೆಲವು ಕಾನೂನು ತೊಡಕುಗಳನ್ನು ಸರಿಪಡಿಸಿ ಕೂಡಲೇ ಚುನಾವಣೆ ನಡೆಸಿ ಜನರ ಅಭಿವೃದ್ಧಿಗೆ ಕ್ರಮ ವಹಿಸಬೇಕು. ಸರಕಾರ ಬಂದಾಗಿನಿಂದ ಗ್ಯಾರಂಟಿಗಳು ಜಾರಿಯಲ್ಲಿತ್ತು. ಸಾಮಾನ ಜನರ ದೃಷ್ಟಿಯಿಂದ ಆಡಳಿತ ಸುಧಾರಣೆಯಾಗುವಂತೆ ಮಾಡಬೇಕು ಭವಿಷ್ಯದಲ್ಲಿ ವೇಮಗಲ್ ಹೋಬಳಿಯನ್ನು ತಾಲೂಕು ಮಾಡಿ ಜನರಿಗೆ ಅನುಕೂಲವಾಗುವಂತೆ ಮಾಡಬೇಕು. ಅಭಿವೃದ್ಧಿ ವಿಚಾರದಲ್ಲಿ ಸದಾ ಸರಕಾರ ಮತ್ತು ಜನಪ್ರತಿನಿಧಿಗಳಿಗೆ ಮನವರಿಕೆ ಮಾಡುವುದು ನನ್ನ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ವೇಮಗಲ್ ಪಟ್ಟಣ ಪಂಚಾಯತಿ ಆಡಳಿತಾಧಿಕಾರಿ ಹಾಗೂ ತಹಶಿಲ್ದಾರ್ ಹರ್ಷವರ್ಧನ್, ತಾಪಂ ಮಾಜಿ ಅಧ್ಯಕ್ಷರಾದ ಉದಯಶಂಕರ್, ಮುನಿಯಪ್ಪ, ಮುಖಂಡರಾದ ನಾಗನಾಳ ಸೋಮಣ್ಣ, ಗದ್ದೆಕಣ್ಣೂರು ದಯಾನಂದ್, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಚಂಜಿಮಲೆ ರಮೇಶ್, ವೆಂಕಟೇಶ್, ಸಿಎಂಎಂ ಮಂಜು, ಖಾಜಿಕಲ್ಲಹಳ್ಳಿ ಮುನಿರಾಜು, ನಾಗರಾಜ್, ಜರೀನ ತಾಜ್, ರವಿಕುಮಾರ್, ಪರ್ಜೇನಹಳ್ಳಿ ನಾಗೇಶ್, ಮುಂತಾದವರು ಇದ್ದರು

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

3 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

15 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

18 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago