Categories: ಕೋಲಾರ

ರಾಜ್ಯ ಸರಕಾರದ ಮುಂಗಾರು ಬೆಳೆ ಪರಿಹಾರ ಬಿಡುಗಡೆಗೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಒತ್ತಾಯ

ಕೋಲಾರ: ರಾಜ್ಯದ ಕಾಂಗ್ರೆಸ್ ಸರಕಾರವು ಕೂಡಲೇ ರೈತರಿಗೆ 2023-24 ನೇ ಸಾಲಿನ ಬೆಳ ಪರಿಹಾರದ ಹಣವನ್ನು ರೈತರ ಖಾತೆಗೆ ಜಮೆ ಮಾಡುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆರ್.ಆನಂದ್ ಮಾತನಾಡಿ, ರಾಜ್ಯದಲ್ಲಿ ಹಿಂದಿನ ವರ್ಷ ಮಳೆಯ ಕೊರತೆಯಿಂದ ಬರಗಾಲ ಸೃಷ್ಟಿಯಾಗಿದ್ದು ರೈತರು ಸೇರಿದಂತೆ ಕೃಷಿ ಕೂಲಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ರಾಜ್ಯ ಸರ್ಕಾರವು ಕೂಡಲೇ ಸಮರೋಪಾದಿಯಲ್ಲಿ ಕೆಲಸ ಮಾಡಿ ಪರಿಹಾರವನ್ನು ರೈತರಿಗೆ ನೀಡಬೇಕಾಗಿದೆ. ಈಗಾಗಲೇ ಕೇಂದ್ರ ಸರ್ಕಾರವು 3454 ಕೋಟಿ ರೂಪಾಯಿಗಳ ಬೆಳೆ ಹಾನಿ ಪರಿಹಾರ ಹಣವನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರಕಾರವು ಬೆರಳೆಣಿಕೆಯಷ್ಟೇ ರೈತರಿಗೆ ಮಾತ್ರ ನೀಡಿದ್ದು, ಕೂಡಲೇ ಎಲ್ಲಾ ರೈತರಿಗೆ ಪರಿಹಾರ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಕೇಂದ್ರ ಸರಕಾರದ ಪರಿಹಾರ ತಡವಾದ ಕಾರಣ ರಾಜ್ಯ ಸರ್ಕಾರವು 33,55,599 ಫಲಾನುಭವಿಗಳಿಗೆ ಮುಂಗಡ ರೂಪದಲ್ಲಿ ಎರಡು ಸಾವಿರ ನೀಡಿತ್ತು. ಇದಕ್ಕೆ ಸರಕಾರದ ಬೊಕ್ಕಸದಿಂದ 685 ಕೋಟಿ ಬಿಡುಗಡೆ ಮಾಡಿತ್ತು. ಯಾವಾಗ ಕೇಂದ್ರದ ಬಿಜೆಪಿ ಸರಕಾರವು 3454 ಕೋಟಿ ಬಿಡುಗಡೆ ಮಾಡುತ್ತಿದ್ದಂತೆಯೇ ರಾಜ್ಯ ಸರಕಾರದ ಮುಂಗಡವಾಗಿ ಕೊಟ್ಟಿದ್ದ ಎರಡು ಸಾವಿರ ಬಿಟ್ಟು ಉಳಿದ ಹಣವನ್ನು ಜಮೆ ಮಾಡಿದ್ದು, ರೈತರಲ್ಲಿ ಗೊಂದಲಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಕೂಡಲೇ ರಾಜ್ಯ ಸರಕಾರ ಈ ತಾರತಮ್ಯ ನೀತಿಯನ್ನು ಸರಿಪಡಿಸಿ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣವನ್ನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಜನ ಹೈನುಗಾರಿಕೆಯನ್ನು ನಂಬಿ ಜೀವನ ನಡೆಸುತ್ತಿದ್ದು, ಹಾಲು ಉತ್ಪಾದಕರಿಗೆ ಸುಮಾರು ಎಂಟು ತಿಂಗಳಿಂದ ಪೋತ್ಸಾಹಧನ ಬಿಡುಗಡೆ ಮಾಡಿಲ್ಲ. ಕಳೆದ ವರ್ಷವೂ ಬರಗಾಲವಿದ್ದ ಕಾರಣ ಜಾನುವಾರುಗಳಿಗೆ ಮೇವು ಖರೀದಿಸಲು ಆಗಿರಲಿಲ್ಲ. ಮೇವಿನ ಕೊರತೆ ಹಿನ್ನೆಲೆಯಲ್ಲಿ ಮೇವಿನ ದರ ಏರಿಕೆಯಾಗಿದೆ. ಕೃಷಿ ಚಟುವಟಿಕೆ ನಡೆಯದ ಕಾರಣ ಕೃಷಿ ಕೂಲಿ ಕಾರ್ಮಿಕರಿಗೆ ಆರ್ಥಿಕ ಸಮಸ್ಯೆಯಾಗಿದೆ. ಉದ್ಯೋಗವಿಲ್ಲದ ಸ್ಥಿತಿಯಲ್ಲಿ ಜಿಲ್ಲೆಯ ಜನ ಬದುಕುವಂತಾಗಿದ್ದು ರಾಜ್ಯ ಸರಕಾರದ ಪರಿಹಾರ ಹಣವನ್ನು ನಂಬಿದ್ದು ಕೂಡಲೇ ಬಿಡುಗಡೆ ಮಾಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ವಿದ್ಯುತ್‌ ಟ್ರಾನ್ಸ್‌ಫರ್ಮ್ ಬದಲಾವಣೆಗೆ ಇದ್ದ 25 ಸಾವಿರದಿಂದ ಒಂದುವರೆ ಲಕ್ಷಕ್ಕೆ ಏರಿಕೆ ಮಾಡಿದ್ದಾರೆ. ಜೊತೆಗೆ ಪ್ರತಿ ಯೂನಿಟ್ ಮೇಲೆ 8 ರೂಪಾಯಿ ಹೆಚ್ಚಳ ಮಾಡಿದ್ದು, ರೈತರಿಗೆ ಬಿತ್ತನೆ ಸಮಯದಲ್ಲಿ ರೈತರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ. ಕೃಷಿಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳಿಗೆ ಅನುದಾನವನ್ನು ನಿಲ್ಲಿಸಿದ್ದು ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹನುಮಪ್ಪ, ಬೆಳ್ಳಾವಿ ಸೋಮಣ್ಣ,, ಉಪಾಧ್ಯಕ್ಷರಾದ ಗೋಪಸಂದ್ರ ನಾರಾಯಣಸ್ವಾಮಿ, ಹುಣಸಿಕೋಟೆ ಶ್ರೀನಿವಾಸ್, ಸತೀಶ್ ಗೌಡ, ಖಜಾಂಚಿ ಪಿ.ವೆಂಕಟೇಶ್, ಕಾರ್ಯದರ್ಶಿ ಚಲಪತಿ ಮುಖಂಡರಾದ ಬೀಸೇಗೌಡ, ಓಹಿಲೇಶ್, ಅಗ್ರಹಾರ ರಂಗೇಶ್, ಬೈಪನಹಳ್ಳಿ ನಾರಾಯಣಸ್ವಾಮಿ, ಅಶ್ವಥ್ ಗೌಡ, ವೆಂಕಟೇಶ್ ಗೌಡ, ಪ್ರಶಾಂತ್ ಕಮಾರ್, ನಾಗರಾಜರೆಡ್ಡಿ, ಮುಂತಾದವರು ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

13 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago