Categories: ಕೋಲಾರ

ರಾಜ್ಯ ಸರಕಾರದ ಮುಂಗಾರು ಬೆಳೆ ಪರಿಹಾರ ಬಿಡುಗಡೆಗೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಒತ್ತಾಯ

ಕೋಲಾರ: ರಾಜ್ಯದ ಕಾಂಗ್ರೆಸ್ ಸರಕಾರವು ಕೂಡಲೇ ರೈತರಿಗೆ 2023-24 ನೇ ಸಾಲಿನ ಬೆಳ ಪರಿಹಾರದ ಹಣವನ್ನು ರೈತರ ಖಾತೆಗೆ ಜಮೆ ಮಾಡುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆರ್.ಆನಂದ್ ಮಾತನಾಡಿ, ರಾಜ್ಯದಲ್ಲಿ ಹಿಂದಿನ ವರ್ಷ ಮಳೆಯ ಕೊರತೆಯಿಂದ ಬರಗಾಲ ಸೃಷ್ಟಿಯಾಗಿದ್ದು ರೈತರು ಸೇರಿದಂತೆ ಕೃಷಿ ಕೂಲಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ರಾಜ್ಯ ಸರ್ಕಾರವು ಕೂಡಲೇ ಸಮರೋಪಾದಿಯಲ್ಲಿ ಕೆಲಸ ಮಾಡಿ ಪರಿಹಾರವನ್ನು ರೈತರಿಗೆ ನೀಡಬೇಕಾಗಿದೆ. ಈಗಾಗಲೇ ಕೇಂದ್ರ ಸರ್ಕಾರವು 3454 ಕೋಟಿ ರೂಪಾಯಿಗಳ ಬೆಳೆ ಹಾನಿ ಪರಿಹಾರ ಹಣವನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರಕಾರವು ಬೆರಳೆಣಿಕೆಯಷ್ಟೇ ರೈತರಿಗೆ ಮಾತ್ರ ನೀಡಿದ್ದು, ಕೂಡಲೇ ಎಲ್ಲಾ ರೈತರಿಗೆ ಪರಿಹಾರ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಕೇಂದ್ರ ಸರಕಾರದ ಪರಿಹಾರ ತಡವಾದ ಕಾರಣ ರಾಜ್ಯ ಸರ್ಕಾರವು 33,55,599 ಫಲಾನುಭವಿಗಳಿಗೆ ಮುಂಗಡ ರೂಪದಲ್ಲಿ ಎರಡು ಸಾವಿರ ನೀಡಿತ್ತು. ಇದಕ್ಕೆ ಸರಕಾರದ ಬೊಕ್ಕಸದಿಂದ 685 ಕೋಟಿ ಬಿಡುಗಡೆ ಮಾಡಿತ್ತು. ಯಾವಾಗ ಕೇಂದ್ರದ ಬಿಜೆಪಿ ಸರಕಾರವು 3454 ಕೋಟಿ ಬಿಡುಗಡೆ ಮಾಡುತ್ತಿದ್ದಂತೆಯೇ ರಾಜ್ಯ ಸರಕಾರದ ಮುಂಗಡವಾಗಿ ಕೊಟ್ಟಿದ್ದ ಎರಡು ಸಾವಿರ ಬಿಟ್ಟು ಉಳಿದ ಹಣವನ್ನು ಜಮೆ ಮಾಡಿದ್ದು, ರೈತರಲ್ಲಿ ಗೊಂದಲಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಕೂಡಲೇ ರಾಜ್ಯ ಸರಕಾರ ಈ ತಾರತಮ್ಯ ನೀತಿಯನ್ನು ಸರಿಪಡಿಸಿ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣವನ್ನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಜನ ಹೈನುಗಾರಿಕೆಯನ್ನು ನಂಬಿ ಜೀವನ ನಡೆಸುತ್ತಿದ್ದು, ಹಾಲು ಉತ್ಪಾದಕರಿಗೆ ಸುಮಾರು ಎಂಟು ತಿಂಗಳಿಂದ ಪೋತ್ಸಾಹಧನ ಬಿಡುಗಡೆ ಮಾಡಿಲ್ಲ. ಕಳೆದ ವರ್ಷವೂ ಬರಗಾಲವಿದ್ದ ಕಾರಣ ಜಾನುವಾರುಗಳಿಗೆ ಮೇವು ಖರೀದಿಸಲು ಆಗಿರಲಿಲ್ಲ. ಮೇವಿನ ಕೊರತೆ ಹಿನ್ನೆಲೆಯಲ್ಲಿ ಮೇವಿನ ದರ ಏರಿಕೆಯಾಗಿದೆ. ಕೃಷಿ ಚಟುವಟಿಕೆ ನಡೆಯದ ಕಾರಣ ಕೃಷಿ ಕೂಲಿ ಕಾರ್ಮಿಕರಿಗೆ ಆರ್ಥಿಕ ಸಮಸ್ಯೆಯಾಗಿದೆ. ಉದ್ಯೋಗವಿಲ್ಲದ ಸ್ಥಿತಿಯಲ್ಲಿ ಜಿಲ್ಲೆಯ ಜನ ಬದುಕುವಂತಾಗಿದ್ದು ರಾಜ್ಯ ಸರಕಾರದ ಪರಿಹಾರ ಹಣವನ್ನು ನಂಬಿದ್ದು ಕೂಡಲೇ ಬಿಡುಗಡೆ ಮಾಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ವಿದ್ಯುತ್‌ ಟ್ರಾನ್ಸ್‌ಫರ್ಮ್ ಬದಲಾವಣೆಗೆ ಇದ್ದ 25 ಸಾವಿರದಿಂದ ಒಂದುವರೆ ಲಕ್ಷಕ್ಕೆ ಏರಿಕೆ ಮಾಡಿದ್ದಾರೆ. ಜೊತೆಗೆ ಪ್ರತಿ ಯೂನಿಟ್ ಮೇಲೆ 8 ರೂಪಾಯಿ ಹೆಚ್ಚಳ ಮಾಡಿದ್ದು, ರೈತರಿಗೆ ಬಿತ್ತನೆ ಸಮಯದಲ್ಲಿ ರೈತರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ. ಕೃಷಿಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳಿಗೆ ಅನುದಾನವನ್ನು ನಿಲ್ಲಿಸಿದ್ದು ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹನುಮಪ್ಪ, ಬೆಳ್ಳಾವಿ ಸೋಮಣ್ಣ,, ಉಪಾಧ್ಯಕ್ಷರಾದ ಗೋಪಸಂದ್ರ ನಾರಾಯಣಸ್ವಾಮಿ, ಹುಣಸಿಕೋಟೆ ಶ್ರೀನಿವಾಸ್, ಸತೀಶ್ ಗೌಡ, ಖಜಾಂಚಿ ಪಿ.ವೆಂಕಟೇಶ್, ಕಾರ್ಯದರ್ಶಿ ಚಲಪತಿ ಮುಖಂಡರಾದ ಬೀಸೇಗೌಡ, ಓಹಿಲೇಶ್, ಅಗ್ರಹಾರ ರಂಗೇಶ್, ಬೈಪನಹಳ್ಳಿ ನಾರಾಯಣಸ್ವಾಮಿ, ಅಶ್ವಥ್ ಗೌಡ, ವೆಂಕಟೇಶ್ ಗೌಡ, ಪ್ರಶಾಂತ್ ಕಮಾರ್, ನಾಗರಾಜರೆಡ್ಡಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

21 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago