Categories: ಕೋಲಾರ

ರಾಜ್ಯ ಸರ್ಕಾರದ ಖಾಲಿ ಹುದ್ದೆಗಳ ಭರ್ತಿಗೆ ಕಲ್ಲಂಡೂರು ಡಾ‌.ಕೆ ನಾಗರಾಜ್ ಒತ್ತಾಯ

ಕೋಲಾರ: ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಸುಮಾರು 2.80 ಲಕ್ಷದಷ್ಟು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ನಿರುದ್ಯೋಗ ಪದವೀಧರರಿಗೆ ಉದ್ಯೋಗ ನೀಡುವಂತೆ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ಕೆ ನಾಗರಾಜ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ‘ಎ’ ದರ್ಜೆಯ 16,000, ‘ಬಿ’ ದರ್ಜೆಯ 16,000 ‘ಸಿ’ ದರ್ಜೆಯ 1,66,000, ಮತ್ತು ‘ಡಿ’ ದರ್ಜೆಯ 77,000 ಸೇರಿದಂತೆ ಒಟ್ಟು 2.80 ಲಕ್ಷದಷ್ಟು ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರದ ಅಂಕಿಅಂಶಗಳ ಮೂಲಕವೇ ಬಹಿರಂಗಗೊಂಡಿದ್ದು ಅ ಹುದ್ದೆಗಳಿಗೆ ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ ಗುತ್ತಿಗೆ ಪದ್ಧತಿಯಲ್ಲಿ ನಿರ್ವಹಿಸುತ್ತಿರುವ ನೌಕರರನ್ನು ಕಾಯಂ ಉದ್ಯೋಗಿಗಳ್ನಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಯಲ್ಲಿ
ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು ಒಳ್ಳೆಯ ಬೆಳವಣಿಗೆಯಾಗಿದೆ ಆದರೆ ಪದವಿ ಮತ್ತು ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿಗೆ ಮಾತ್ರವಲ್ಲದೆ ಎಲ್ಲಾ ಅರ್ಹ ನಿರುದ್ಯೋಗಿಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಷ್ಟೋ ಯುವಕರು ಪದವಿಯನ್ನು ಪಡೆದು ಉದ್ಯೋಗಕ್ಕಾಗಿ ಕಾಯುತ್ತಿದ್ದು ಅವರಿಗೆ ಅವಕಾಶ ಮಾಡಲು ಕೂಡಲೇ ಖಾಲಿ ಹುದ್ದೆಗಳ ನೇಮಕಾತಿಗೆ ಸರ್ಕಾರವು ಮುಂದಾಗಬೇಕು ಎಂದರು.

ರಾಜ್ಯ ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯಿಂದ ಸಾಕಷ್ಟು ತೊಂದರೆಗಳಾಗಿದ್ದು ಕೂಡಲೇ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ( ಒಪಿಎಸ್) ಯನ್ನು ಮರು ಸ್ಥಾಪಿಸುವ ಮೂಲಕ ಸರ್ಕಾರಿ ನೌಕರರ ಹಿತ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

3 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

5 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

6 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

19 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

20 hours ago