ಕೋಲಾರ: ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಸುಮಾರು 2.80 ಲಕ್ಷದಷ್ಟು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ನಿರುದ್ಯೋಗ ಪದವೀಧರರಿಗೆ ಉದ್ಯೋಗ ನೀಡುವಂತೆ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ಕೆ ನಾಗರಾಜ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ‘ಎ’ ದರ್ಜೆಯ 16,000, ‘ಬಿ’ ದರ್ಜೆಯ 16,000 ‘ಸಿ’ ದರ್ಜೆಯ 1,66,000, ಮತ್ತು ‘ಡಿ’ ದರ್ಜೆಯ 77,000 ಸೇರಿದಂತೆ ಒಟ್ಟು 2.80 ಲಕ್ಷದಷ್ಟು ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರದ ಅಂಕಿಅಂಶಗಳ ಮೂಲಕವೇ ಬಹಿರಂಗಗೊಂಡಿದ್ದು ಅ ಹುದ್ದೆಗಳಿಗೆ ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ ಗುತ್ತಿಗೆ ಪದ್ಧತಿಯಲ್ಲಿ ನಿರ್ವಹಿಸುತ್ತಿರುವ ನೌಕರರನ್ನು ಕಾಯಂ ಉದ್ಯೋಗಿಗಳ್ನಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಯಲ್ಲಿ
ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು ಒಳ್ಳೆಯ ಬೆಳವಣಿಗೆಯಾಗಿದೆ ಆದರೆ ಪದವಿ ಮತ್ತು ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿಗೆ ಮಾತ್ರವಲ್ಲದೆ ಎಲ್ಲಾ ಅರ್ಹ ನಿರುದ್ಯೋಗಿಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಷ್ಟೋ ಯುವಕರು ಪದವಿಯನ್ನು ಪಡೆದು ಉದ್ಯೋಗಕ್ಕಾಗಿ ಕಾಯುತ್ತಿದ್ದು ಅವರಿಗೆ ಅವಕಾಶ ಮಾಡಲು ಕೂಡಲೇ ಖಾಲಿ ಹುದ್ದೆಗಳ ನೇಮಕಾತಿಗೆ ಸರ್ಕಾರವು ಮುಂದಾಗಬೇಕು ಎಂದರು.
ರಾಜ್ಯ ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯಿಂದ ಸಾಕಷ್ಟು ತೊಂದರೆಗಳಾಗಿದ್ದು ಕೂಡಲೇ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ( ಒಪಿಎಸ್) ಯನ್ನು ಮರು ಸ್ಥಾಪಿಸುವ ಮೂಲಕ ಸರ್ಕಾರಿ ನೌಕರರ ಹಿತ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…