ಕೋಲಾರ: ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಸುಮಾರು 2.80 ಲಕ್ಷದಷ್ಟು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ನಿರುದ್ಯೋಗ ಪದವೀಧರರಿಗೆ ಉದ್ಯೋಗ ನೀಡುವಂತೆ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ಕೆ ನಾಗರಾಜ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ‘ಎ’ ದರ್ಜೆಯ 16,000, ‘ಬಿ’ ದರ್ಜೆಯ 16,000 ‘ಸಿ’ ದರ್ಜೆಯ 1,66,000, ಮತ್ತು ‘ಡಿ’ ದರ್ಜೆಯ 77,000 ಸೇರಿದಂತೆ ಒಟ್ಟು 2.80 ಲಕ್ಷದಷ್ಟು ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರದ ಅಂಕಿಅಂಶಗಳ ಮೂಲಕವೇ ಬಹಿರಂಗಗೊಂಡಿದ್ದು ಅ ಹುದ್ದೆಗಳಿಗೆ ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ ಗುತ್ತಿಗೆ ಪದ್ಧತಿಯಲ್ಲಿ ನಿರ್ವಹಿಸುತ್ತಿರುವ ನೌಕರರನ್ನು ಕಾಯಂ ಉದ್ಯೋಗಿಗಳ್ನಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಯಲ್ಲಿ
ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು ಒಳ್ಳೆಯ ಬೆಳವಣಿಗೆಯಾಗಿದೆ ಆದರೆ ಪದವಿ ಮತ್ತು ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿಗೆ ಮಾತ್ರವಲ್ಲದೆ ಎಲ್ಲಾ ಅರ್ಹ ನಿರುದ್ಯೋಗಿಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಷ್ಟೋ ಯುವಕರು ಪದವಿಯನ್ನು ಪಡೆದು ಉದ್ಯೋಗಕ್ಕಾಗಿ ಕಾಯುತ್ತಿದ್ದು ಅವರಿಗೆ ಅವಕಾಶ ಮಾಡಲು ಕೂಡಲೇ ಖಾಲಿ ಹುದ್ದೆಗಳ ನೇಮಕಾತಿಗೆ ಸರ್ಕಾರವು ಮುಂದಾಗಬೇಕು ಎಂದರು.
ರಾಜ್ಯ ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯಿಂದ ಸಾಕಷ್ಟು ತೊಂದರೆಗಳಾಗಿದ್ದು ಕೂಡಲೇ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ( ಒಪಿಎಸ್) ಯನ್ನು ಮರು ಸ್ಥಾಪಿಸುವ ಮೂಲಕ ಸರ್ಕಾರಿ ನೌಕರರ ಹಿತ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…