Categories: ಕೋಲಾರ

ರಾಜ್ಯ ಸರ್ಕಾರದ ಖಾಲಿ ಹುದ್ದೆಗಳ ಭರ್ತಿಗೆ ಕಲ್ಲಂಡೂರು ಡಾ‌.ಕೆ ನಾಗರಾಜ್ ಒತ್ತಾಯ

ಕೋಲಾರ: ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಸುಮಾರು 2.80 ಲಕ್ಷದಷ್ಟು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ನಿರುದ್ಯೋಗ ಪದವೀಧರರಿಗೆ ಉದ್ಯೋಗ ನೀಡುವಂತೆ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ಕೆ ನಾಗರಾಜ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ‘ಎ’ ದರ್ಜೆಯ 16,000, ‘ಬಿ’ ದರ್ಜೆಯ 16,000 ‘ಸಿ’ ದರ್ಜೆಯ 1,66,000, ಮತ್ತು ‘ಡಿ’ ದರ್ಜೆಯ 77,000 ಸೇರಿದಂತೆ ಒಟ್ಟು 2.80 ಲಕ್ಷದಷ್ಟು ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರದ ಅಂಕಿಅಂಶಗಳ ಮೂಲಕವೇ ಬಹಿರಂಗಗೊಂಡಿದ್ದು ಅ ಹುದ್ದೆಗಳಿಗೆ ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ ಗುತ್ತಿಗೆ ಪದ್ಧತಿಯಲ್ಲಿ ನಿರ್ವಹಿಸುತ್ತಿರುವ ನೌಕರರನ್ನು ಕಾಯಂ ಉದ್ಯೋಗಿಗಳ್ನಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಯಲ್ಲಿ
ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು ಒಳ್ಳೆಯ ಬೆಳವಣಿಗೆಯಾಗಿದೆ ಆದರೆ ಪದವಿ ಮತ್ತು ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿಗೆ ಮಾತ್ರವಲ್ಲದೆ ಎಲ್ಲಾ ಅರ್ಹ ನಿರುದ್ಯೋಗಿಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಷ್ಟೋ ಯುವಕರು ಪದವಿಯನ್ನು ಪಡೆದು ಉದ್ಯೋಗಕ್ಕಾಗಿ ಕಾಯುತ್ತಿದ್ದು ಅವರಿಗೆ ಅವಕಾಶ ಮಾಡಲು ಕೂಡಲೇ ಖಾಲಿ ಹುದ್ದೆಗಳ ನೇಮಕಾತಿಗೆ ಸರ್ಕಾರವು ಮುಂದಾಗಬೇಕು ಎಂದರು.

ರಾಜ್ಯ ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯಿಂದ ಸಾಕಷ್ಟು ತೊಂದರೆಗಳಾಗಿದ್ದು ಕೂಡಲೇ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ( ಒಪಿಎಸ್) ಯನ್ನು ಮರು ಸ್ಥಾಪಿಸುವ ಮೂಲಕ ಸರ್ಕಾರಿ ನೌಕರರ ಹಿತ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 hour ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

8 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

20 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

20 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

21 hours ago