Categories: ಕೋಲಾರ

ರಾಜ್ಯ ಸರ್ಕಾರದ ಖಾಲಿ ಹುದ್ದೆಗಳ ಭರ್ತಿಗೆ ಕಲ್ಲಂಡೂರು ಡಾ‌.ಕೆ ನಾಗರಾಜ್ ಒತ್ತಾಯ

ಕೋಲಾರ: ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಸುಮಾರು 2.80 ಲಕ್ಷದಷ್ಟು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ನಿರುದ್ಯೋಗ ಪದವೀಧರರಿಗೆ ಉದ್ಯೋಗ ನೀಡುವಂತೆ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ಕೆ ನಾಗರಾಜ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ‘ಎ’ ದರ್ಜೆಯ 16,000, ‘ಬಿ’ ದರ್ಜೆಯ 16,000 ‘ಸಿ’ ದರ್ಜೆಯ 1,66,000, ಮತ್ತು ‘ಡಿ’ ದರ್ಜೆಯ 77,000 ಸೇರಿದಂತೆ ಒಟ್ಟು 2.80 ಲಕ್ಷದಷ್ಟು ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರದ ಅಂಕಿಅಂಶಗಳ ಮೂಲಕವೇ ಬಹಿರಂಗಗೊಂಡಿದ್ದು ಅ ಹುದ್ದೆಗಳಿಗೆ ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ ಗುತ್ತಿಗೆ ಪದ್ಧತಿಯಲ್ಲಿ ನಿರ್ವಹಿಸುತ್ತಿರುವ ನೌಕರರನ್ನು ಕಾಯಂ ಉದ್ಯೋಗಿಗಳ್ನಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಯಲ್ಲಿ
ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು ಒಳ್ಳೆಯ ಬೆಳವಣಿಗೆಯಾಗಿದೆ ಆದರೆ ಪದವಿ ಮತ್ತು ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿಗೆ ಮಾತ್ರವಲ್ಲದೆ ಎಲ್ಲಾ ಅರ್ಹ ನಿರುದ್ಯೋಗಿಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಷ್ಟೋ ಯುವಕರು ಪದವಿಯನ್ನು ಪಡೆದು ಉದ್ಯೋಗಕ್ಕಾಗಿ ಕಾಯುತ್ತಿದ್ದು ಅವರಿಗೆ ಅವಕಾಶ ಮಾಡಲು ಕೂಡಲೇ ಖಾಲಿ ಹುದ್ದೆಗಳ ನೇಮಕಾತಿಗೆ ಸರ್ಕಾರವು ಮುಂದಾಗಬೇಕು ಎಂದರು.

ರಾಜ್ಯ ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯಿಂದ ಸಾಕಷ್ಟು ತೊಂದರೆಗಳಾಗಿದ್ದು ಕೂಡಲೇ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ( ಒಪಿಎಸ್) ಯನ್ನು ಮರು ಸ್ಥಾಪಿಸುವ ಮೂಲಕ ಸರ್ಕಾರಿ ನೌಕರರ ಹಿತ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

9 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago