Categories: ಕೋಲಾರ

ರಾಜ್ಯ ಸರ್ಕಾರದ ಬಸ್ ದರ ಏರಿಕೆ ಆದೇಶ ವಾಪಸ್ಸು ಪಡೆಯುವಂತೆ ಡಾ.ಕೆ.ನಾಗರಾಜ್ ಒತ್ತಾಯ

ಕೋಲಾರ: ರಾಜ್ಯ ಸರ್ಕಾರವು ಶೇ 15 ರಷ್ಟು ಬಸ್ ದರ ಹೆಚ್ಚಳ ಮಾಡಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ ಕೂಡಲೇ ಬಸ್ ದರ ಹೆಚ್ಚಳ ಆದೇಶವನ್ನು ವಾಪಸ್ಸು ಪಡೆದು ಸಾಮಾನ್ಯ ಜನರನ್ನು ರಕ್ಷಣೆ ಮಾಡುವಂತೆ ಜೆಡಿಯು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಕಲ್ಲಂಡೂರು ಡಾ.ಕೆ ನಾಗರಾಜ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸರ್ಕಾರವನ್ನು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಮುಂದೆ ತಂದು ಜನರನ್ನು ಯಾಮಾರಿಸಿದ್ದಾರೆ ಅಧಿಕಾರಕ್ಕೆ ಬಂದ ನಂತರ ಒಂದರ ಮೇಲೊಂದರಂತೆ ವಸ್ತುಗಳ ಬೆಲೆ ಹೆಚ್ಚಳ ಮಾಡುವ ಮೂಲಕ ಸಾಮಾನ್ಯ ಜನರ ಜೀವನಕ್ಕೆ ತೊಂದರೆಯಾಗಿದೆ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತವಾಗಿ ಎಂದು ಹೇಳಿ ಪುರುಷರಿಗೆ ಅದರ ಹೊರೆ ಹೆಚ್ಚಿಸಿದರು ಇದೀಗ ಮತ್ತೆ ಶೇ.15ರಷ್ಟು ಬಸ್‌‍ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆಯನ್ನೇ ಆಶ್ರಯಿಸಿರುವ ಸಾಮಾನ್ಯ ಜನರಿಗೆ ಬರೆ ಎಳೆದಿದ್ದಾರೆ ಕಾಂಗ್ರೆಸ್‌‍ ಸರ್ಕಾರದ ಈ ನಿರ್ಧಾರವು ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದ್ದು ಕೂಡಲೇ ಈ ಆದೇಶವನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಹಣಕ್ಕೆ ಕತ್ತರಿ ಹಾಕಿದ್ದಾರೆ ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಅನಿವಾರ್ಯ ಎಂಬಂತೆ, ಆಸ್ತಿ ತೆರಿಗೆ ಏರಿಕೆ, ಮುದ್ರಾಂಕ ದರ ಏರಿಕೆ, ನೀರಿನ ದರ ಏರಿಕೆ, ಜನನ ಮರಣ ಪ್ರಮಾಣಪತ್ರ ಶುಲ್ಕ ಏರಿಕೆ, ಹಾಲಿನ ದರ ಏರಿಕೆ ಅನಿವಾರ್ಯ ಎಂದು ಸಮರ್ಥನೆ ಮಾಡಿಕೊಂಡ ಸರ್ಕಾರವು ಇವಾಗ ಬಸ್‌‍ ದರ ಏರಿಕೆ ಮಾಡಿದ್ದಾರೆ ಜನರು ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಪ್ರತಿಭಟನೆ ಅನಿವಾರ್ಯವಾಗ ಬೇಕಾಗುತ್ತದೆ ಎಂದು ಸರ್ಕಾರವನ್ನು ಎಚ್ಚರಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಖಜಾನೆಯಲ್ಲಿ ಹಣ ಖಾಲಿಯಾಗಿದೆ ಎಂದು ತಮ್ಮ ಪಕ್ಷದವರೇ ಹೇಳಿದ್ದು ಬಸ್ ದರ ಏರಿಕೆಯಿಂದ ಸಾಬೀತಾಗಿದೆ ದುಡಿಯುವ ಜನರಿಗೆ ದಿನನಿತ್ಯದ ಬೆಲೆ ಏರಿಕೆಗಳು ಸರ್ಕಾರದ ಹೊಸ ಗ್ಯಾರಂಟಿ ಯೋಜನೆಯಾಗಿದೆ ಸರಕಾರ ಜನರಿಗೆ ತೊಂದರೆ ಕೊಡುವುದನ್ನು ಬಿಟ್ಟು ಸಾಮಾನ್ಯ ಜನರ ಏಳಿಗೆಗಾಗಿ ಹಾಗೂ ಚುನಾವಣೆಯ ಪೂರ್ವದಲ್ಲಿ ಕೊಟ್ಟು ಭರವಸೆಗಳನ್ನು ಜಾರಿ ಮಾಡಲು ಮುಂದಾಗುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

17 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 day ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 day ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 day ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 day ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

2 days ago