ಕೋಲಾರ: ರಾಜ್ಯ ಸರ್ಕಾರವು ಶೇ 15 ರಷ್ಟು ಬಸ್ ದರ ಹೆಚ್ಚಳ ಮಾಡಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ ಕೂಡಲೇ ಬಸ್ ದರ ಹೆಚ್ಚಳ ಆದೇಶವನ್ನು ವಾಪಸ್ಸು ಪಡೆದು ಸಾಮಾನ್ಯ ಜನರನ್ನು ರಕ್ಷಣೆ ಮಾಡುವಂತೆ ಜೆಡಿಯು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಕಲ್ಲಂಡೂರು ಡಾ.ಕೆ ನಾಗರಾಜ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸರ್ಕಾರವನ್ನು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಮುಂದೆ ತಂದು ಜನರನ್ನು ಯಾಮಾರಿಸಿದ್ದಾರೆ ಅಧಿಕಾರಕ್ಕೆ ಬಂದ ನಂತರ ಒಂದರ ಮೇಲೊಂದರಂತೆ ವಸ್ತುಗಳ ಬೆಲೆ ಹೆಚ್ಚಳ ಮಾಡುವ ಮೂಲಕ ಸಾಮಾನ್ಯ ಜನರ ಜೀವನಕ್ಕೆ ತೊಂದರೆಯಾಗಿದೆ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತವಾಗಿ ಎಂದು ಹೇಳಿ ಪುರುಷರಿಗೆ ಅದರ ಹೊರೆ ಹೆಚ್ಚಿಸಿದರು ಇದೀಗ ಮತ್ತೆ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆಯನ್ನೇ ಆಶ್ರಯಿಸಿರುವ ಸಾಮಾನ್ಯ ಜನರಿಗೆ ಬರೆ ಎಳೆದಿದ್ದಾರೆ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವು ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದ್ದು ಕೂಡಲೇ ಈ ಆದೇಶವನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಹಣಕ್ಕೆ ಕತ್ತರಿ ಹಾಕಿದ್ದಾರೆ ಪೆಟ್ರೋಲ್ ಡೀಸೆಲ್ ದರ ಏರಿಕೆ ಅನಿವಾರ್ಯ ಎಂಬಂತೆ, ಆಸ್ತಿ ತೆರಿಗೆ ಏರಿಕೆ, ಮುದ್ರಾಂಕ ದರ ಏರಿಕೆ, ನೀರಿನ ದರ ಏರಿಕೆ, ಜನನ ಮರಣ ಪ್ರಮಾಣಪತ್ರ ಶುಲ್ಕ ಏರಿಕೆ, ಹಾಲಿನ ದರ ಏರಿಕೆ ಅನಿವಾರ್ಯ ಎಂದು ಸಮರ್ಥನೆ ಮಾಡಿಕೊಂಡ ಸರ್ಕಾರವು ಇವಾಗ ಬಸ್ ದರ ಏರಿಕೆ ಮಾಡಿದ್ದಾರೆ ಜನರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಅನಿವಾರ್ಯವಾಗ ಬೇಕಾಗುತ್ತದೆ ಎಂದು ಸರ್ಕಾರವನ್ನು ಎಚ್ಚರಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಖಜಾನೆಯಲ್ಲಿ ಹಣ ಖಾಲಿಯಾಗಿದೆ ಎಂದು ತಮ್ಮ ಪಕ್ಷದವರೇ ಹೇಳಿದ್ದು ಬಸ್ ದರ ಏರಿಕೆಯಿಂದ ಸಾಬೀತಾಗಿದೆ ದುಡಿಯುವ ಜನರಿಗೆ ದಿನನಿತ್ಯದ ಬೆಲೆ ಏರಿಕೆಗಳು ಸರ್ಕಾರದ ಹೊಸ ಗ್ಯಾರಂಟಿ ಯೋಜನೆಯಾಗಿದೆ ಸರಕಾರ ಜನರಿಗೆ ತೊಂದರೆ ಕೊಡುವುದನ್ನು ಬಿಟ್ಟು ಸಾಮಾನ್ಯ ಜನರ ಏಳಿಗೆಗಾಗಿ ಹಾಗೂ ಚುನಾವಣೆಯ ಪೂರ್ವದಲ್ಲಿ ಕೊಟ್ಟು ಭರವಸೆಗಳನ್ನು ಜಾರಿ ಮಾಡಲು ಮುಂದಾಗುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…