Categories: ಕೋಲಾರ

ರಾಜ್ಯ ಸರ್ಕಾರದ ಬಸ್ ದರ ಏರಿಕೆ ಆದೇಶ ವಾಪಸ್ಸು ಪಡೆಯುವಂತೆ ಡಾ.ಕೆ.ನಾಗರಾಜ್ ಒತ್ತಾಯ

ಕೋಲಾರ: ರಾಜ್ಯ ಸರ್ಕಾರವು ಶೇ 15 ರಷ್ಟು ಬಸ್ ದರ ಹೆಚ್ಚಳ ಮಾಡಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ ಕೂಡಲೇ ಬಸ್ ದರ ಹೆಚ್ಚಳ ಆದೇಶವನ್ನು ವಾಪಸ್ಸು ಪಡೆದು ಸಾಮಾನ್ಯ ಜನರನ್ನು ರಕ್ಷಣೆ ಮಾಡುವಂತೆ ಜೆಡಿಯು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಕಲ್ಲಂಡೂರು ಡಾ.ಕೆ ನಾಗರಾಜ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸರ್ಕಾರವನ್ನು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಮುಂದೆ ತಂದು ಜನರನ್ನು ಯಾಮಾರಿಸಿದ್ದಾರೆ ಅಧಿಕಾರಕ್ಕೆ ಬಂದ ನಂತರ ಒಂದರ ಮೇಲೊಂದರಂತೆ ವಸ್ತುಗಳ ಬೆಲೆ ಹೆಚ್ಚಳ ಮಾಡುವ ಮೂಲಕ ಸಾಮಾನ್ಯ ಜನರ ಜೀವನಕ್ಕೆ ತೊಂದರೆಯಾಗಿದೆ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತವಾಗಿ ಎಂದು ಹೇಳಿ ಪುರುಷರಿಗೆ ಅದರ ಹೊರೆ ಹೆಚ್ಚಿಸಿದರು ಇದೀಗ ಮತ್ತೆ ಶೇ.15ರಷ್ಟು ಬಸ್‌‍ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆಯನ್ನೇ ಆಶ್ರಯಿಸಿರುವ ಸಾಮಾನ್ಯ ಜನರಿಗೆ ಬರೆ ಎಳೆದಿದ್ದಾರೆ ಕಾಂಗ್ರೆಸ್‌‍ ಸರ್ಕಾರದ ಈ ನಿರ್ಧಾರವು ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದ್ದು ಕೂಡಲೇ ಈ ಆದೇಶವನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಹಣಕ್ಕೆ ಕತ್ತರಿ ಹಾಕಿದ್ದಾರೆ ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಅನಿವಾರ್ಯ ಎಂಬಂತೆ, ಆಸ್ತಿ ತೆರಿಗೆ ಏರಿಕೆ, ಮುದ್ರಾಂಕ ದರ ಏರಿಕೆ, ನೀರಿನ ದರ ಏರಿಕೆ, ಜನನ ಮರಣ ಪ್ರಮಾಣಪತ್ರ ಶುಲ್ಕ ಏರಿಕೆ, ಹಾಲಿನ ದರ ಏರಿಕೆ ಅನಿವಾರ್ಯ ಎಂದು ಸಮರ್ಥನೆ ಮಾಡಿಕೊಂಡ ಸರ್ಕಾರವು ಇವಾಗ ಬಸ್‌‍ ದರ ಏರಿಕೆ ಮಾಡಿದ್ದಾರೆ ಜನರು ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಪ್ರತಿಭಟನೆ ಅನಿವಾರ್ಯವಾಗ ಬೇಕಾಗುತ್ತದೆ ಎಂದು ಸರ್ಕಾರವನ್ನು ಎಚ್ಚರಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಖಜಾನೆಯಲ್ಲಿ ಹಣ ಖಾಲಿಯಾಗಿದೆ ಎಂದು ತಮ್ಮ ಪಕ್ಷದವರೇ ಹೇಳಿದ್ದು ಬಸ್ ದರ ಏರಿಕೆಯಿಂದ ಸಾಬೀತಾಗಿದೆ ದುಡಿಯುವ ಜನರಿಗೆ ದಿನನಿತ್ಯದ ಬೆಲೆ ಏರಿಕೆಗಳು ಸರ್ಕಾರದ ಹೊಸ ಗ್ಯಾರಂಟಿ ಯೋಜನೆಯಾಗಿದೆ ಸರಕಾರ ಜನರಿಗೆ ತೊಂದರೆ ಕೊಡುವುದನ್ನು ಬಿಟ್ಟು ಸಾಮಾನ್ಯ ಜನರ ಏಳಿಗೆಗಾಗಿ ಹಾಗೂ ಚುನಾವಣೆಯ ಪೂರ್ವದಲ್ಲಿ ಕೊಟ್ಟು ಭರವಸೆಗಳನ್ನು ಜಾರಿ ಮಾಡಲು ಮುಂದಾಗುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

Ramesh Babu

Journalist

Recent Posts

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

15 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 days ago