ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನಿರ್ದೇಶಕರ ಆಯ್ಕೆ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ 34 ನಿರ್ದೇಶಕ ಸ್ಥಾನಗ ಪೈಕಿ 27 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದ 7 ಸ್ಥಾನಗಳಿಗೆ ಸೋಮವಾರ ಚುನಾವಣ ಅಧಿಕಾರಿಗಳಾದ ಆರ್.ಸುರೇಶ್, ಅನಂತಕುಮಾರ್ ಅವರ ನೇತೃತ್ವದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯಿತು.

ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಚುನಾವಣೆ ನಡೆದು, 4 ಗಂಟೆ ನಂತರ ಮತಗಳ ಎಣಿಕೆ ನಡೆಯಿತು.ಸರ್ಕಾರಿ ಪ್ರಾಥಮಿಕ ಶಾಲಾ ವಿಭಾಗದ 4 ಸ್ಥಾನಗಳಿಗೆ ಸ್ಪರ್ಧಿಸಿದ್ದವರಲ್ಲಿ ಎಂ.ಎಸ್.ರಾಜಶೇಖರ್, ವಿ.ಧನಂಜಯ,ಎಂ.ಆರ್.ಕೇಶವಮೂರ್ತಿ,ಡಿ.ಶ್ರೀಧರ್ ಆಯ್ಕೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಒಂದು ಸ್ಥಾನಕ್ಕೆ ನಡೆದ ಮತದಾನದಲ್ಲಿ ಸಿ.ಎಚ್.ರಾಮಚಂದ್ರಯ್ಯ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ವಿಭಾಗದಿಂದ ಎನ್.ಮಹೇಶ್, ಭೂ ಮಾಪನ ಇಲಾಖೆಯಿಂದ ಮಂಜುನಾಥ್ ಆಯ್ಕೆಯಾಗಿದ್ದಾರೆ.

ಅವಿರೋಧವಾಗಿ ಆಯ್ಕೆಯಾದವರು:
ಕೆ.ಎಂ.ಹರೀಶ್ ಕುಮಾರ್ (ಕೃಷಿ ಇಲಾಖೆ), ವಿ.ಸಿ.ನಾಗದೇವ(ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ)

ಬಿ.ವಿನೋದ, ಲಕ್ಷ್ಮೀನರಸಿಂಹಯ್ಯ, ಎಸ್.ಮನೋಜ (ಕಂದಾಯ ಇಲಾಖೆ)

ಎನ್.ಮಂಜುನಾಥ್ (ಲೋಕೋಪಯೋಗಿ ಇಲಾಖೆ)

ಪಿ.ಎನ್.ಪದ್ಮಾವತಿ(ಪಂಚಾಯತ್ ರಾಜ್ ಇಂಜಿನಿಯರಿಂಗ್)

ಎಂ.ಎನ್.ಚಿಕ್ಕೇಗೌಡ, ಟಿ.ಕೆ.ಪ್ರಕಾಶ್(ಸರ್ಕಾರಿ ಪ್ರೌಢ ಶಾಲಾ ವಿಭಾಗ)

ಎಸ್.ದಿವ್ಯ (ಪದವಿ ಕಾಲೇಜು ವಿಭಾಗ)

ವಿ.ಗೋವಿಂದಪ್ಪ (ಸಮಾಜ ಕಲ್ಯಾಣ ಇಲಾಖೆ)

ಎಲ್. ವೆಂಕಟೇಶ್(ಹಿಂದುಳಿದ ವರ್ಗಗಳ ಇಲಾಖೆ)

ಸಿ.ಆರ್.ಚಂದ್ರಕುಮಾರ (ಅರಣ್ಯ ಇಲಾಖೆ)

ಎಲ್.ಶ್ರೀನಿವಾಸಮೂರ್ತಿ, ಟಿ.ಆರ್.ಕುಮಾರ್, ಎಲ್.ಮಹದೇವನಾಯಕ್, ಟಿ.ಸಿ.ಅಮರೇಶ್(ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ)

ಶಶಿಕುಮಾರ್ (ತೋಟಗಾರಿಕಾ ಇಲಾಖೆ)

ಕೆ.ಎಸ್.ಸುಧಾ(ಖಜಾನೆ ಇಲಾಖೆ)

ಸುಶೀಲಕುಮಾರ್ ಕ್ಷತ್ರಿ (ನ್ಯಾಯಾಂಗ ಇಲಾಖೆ)

ಡಿ.ಬಿ.ಗಂಗಭೈರಪ್ಪ, ಬಿ.ಆರ್.ವೀಣಾ(ಗ್ರಾಮೀಣಾಭಿವೃದ್ಧಿ ಪಂಚಾಯಿತ್ ರಾಜ್ ಇಲಾಖೆ)

ಇ.ರವಿಕುಮಾರ್(ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ)

ಎಚ್.ನರಸಿಂಹಮೂರ್ತಿ(ಆಹಾರ ಮತ್ತು ನಾಗರೀಕ ಸರಬರಾಜು)

ಅಬಿದಾ ಅಂಜುಮ್(ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ)

ಬಿ.ವಿ.ರಾಘವೇಂದ್ರ(ಅಬಕಾರಿ ಮತ್ತು ವಾಣಿಜ್ಯ ತೆರಿಗಳ ಇಲಾಖೆ)

ಆರ್.ರಾಮಾಂಜನಯ್ಯ(ಸಹಕಾರ ಮತ್ತು ಸಹಕಾರ ಸಂಘಗಳ ಲೆಕ್ಕ ಪರಿಶೋಧನ ಇಲಾಖೆ

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

7 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

11 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

11 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

16 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago