ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನಿರ್ದೇಶಕರ ಆಯ್ಕೆ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ 34 ನಿರ್ದೇಶಕ ಸ್ಥಾನಗ ಪೈಕಿ 27 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದ 7 ಸ್ಥಾನಗಳಿಗೆ ಸೋಮವಾರ ಚುನಾವಣ ಅಧಿಕಾರಿಗಳಾದ ಆರ್.ಸುರೇಶ್, ಅನಂತಕುಮಾರ್ ಅವರ ನೇತೃತ್ವದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯಿತು.

ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಚುನಾವಣೆ ನಡೆದು, 4 ಗಂಟೆ ನಂತರ ಮತಗಳ ಎಣಿಕೆ ನಡೆಯಿತು.ಸರ್ಕಾರಿ ಪ್ರಾಥಮಿಕ ಶಾಲಾ ವಿಭಾಗದ 4 ಸ್ಥಾನಗಳಿಗೆ ಸ್ಪರ್ಧಿಸಿದ್ದವರಲ್ಲಿ ಎಂ.ಎಸ್.ರಾಜಶೇಖರ್, ವಿ.ಧನಂಜಯ,ಎಂ.ಆರ್.ಕೇಶವಮೂರ್ತಿ,ಡಿ.ಶ್ರೀಧರ್ ಆಯ್ಕೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಒಂದು ಸ್ಥಾನಕ್ಕೆ ನಡೆದ ಮತದಾನದಲ್ಲಿ ಸಿ.ಎಚ್.ರಾಮಚಂದ್ರಯ್ಯ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ವಿಭಾಗದಿಂದ ಎನ್.ಮಹೇಶ್, ಭೂ ಮಾಪನ ಇಲಾಖೆಯಿಂದ ಮಂಜುನಾಥ್ ಆಯ್ಕೆಯಾಗಿದ್ದಾರೆ.

ಅವಿರೋಧವಾಗಿ ಆಯ್ಕೆಯಾದವರು:
ಕೆ.ಎಂ.ಹರೀಶ್ ಕುಮಾರ್ (ಕೃಷಿ ಇಲಾಖೆ), ವಿ.ಸಿ.ನಾಗದೇವ(ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ)

ಬಿ.ವಿನೋದ, ಲಕ್ಷ್ಮೀನರಸಿಂಹಯ್ಯ, ಎಸ್.ಮನೋಜ (ಕಂದಾಯ ಇಲಾಖೆ)

ಎನ್.ಮಂಜುನಾಥ್ (ಲೋಕೋಪಯೋಗಿ ಇಲಾಖೆ)

ಪಿ.ಎನ್.ಪದ್ಮಾವತಿ(ಪಂಚಾಯತ್ ರಾಜ್ ಇಂಜಿನಿಯರಿಂಗ್)

ಎಂ.ಎನ್.ಚಿಕ್ಕೇಗೌಡ, ಟಿ.ಕೆ.ಪ್ರಕಾಶ್(ಸರ್ಕಾರಿ ಪ್ರೌಢ ಶಾಲಾ ವಿಭಾಗ)

ಎಸ್.ದಿವ್ಯ (ಪದವಿ ಕಾಲೇಜು ವಿಭಾಗ)

ವಿ.ಗೋವಿಂದಪ್ಪ (ಸಮಾಜ ಕಲ್ಯಾಣ ಇಲಾಖೆ)

ಎಲ್. ವೆಂಕಟೇಶ್(ಹಿಂದುಳಿದ ವರ್ಗಗಳ ಇಲಾಖೆ)

ಸಿ.ಆರ್.ಚಂದ್ರಕುಮಾರ (ಅರಣ್ಯ ಇಲಾಖೆ)

ಎಲ್.ಶ್ರೀನಿವಾಸಮೂರ್ತಿ, ಟಿ.ಆರ್.ಕುಮಾರ್, ಎಲ್.ಮಹದೇವನಾಯಕ್, ಟಿ.ಸಿ.ಅಮರೇಶ್(ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ)

ಶಶಿಕುಮಾರ್ (ತೋಟಗಾರಿಕಾ ಇಲಾಖೆ)

ಕೆ.ಎಸ್.ಸುಧಾ(ಖಜಾನೆ ಇಲಾಖೆ)

ಸುಶೀಲಕುಮಾರ್ ಕ್ಷತ್ರಿ (ನ್ಯಾಯಾಂಗ ಇಲಾಖೆ)

ಡಿ.ಬಿ.ಗಂಗಭೈರಪ್ಪ, ಬಿ.ಆರ್.ವೀಣಾ(ಗ್ರಾಮೀಣಾಭಿವೃದ್ಧಿ ಪಂಚಾಯಿತ್ ರಾಜ್ ಇಲಾಖೆ)

ಇ.ರವಿಕುಮಾರ್(ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ)

ಎಚ್.ನರಸಿಂಹಮೂರ್ತಿ(ಆಹಾರ ಮತ್ತು ನಾಗರೀಕ ಸರಬರಾಜು)

ಅಬಿದಾ ಅಂಜುಮ್(ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ)

ಬಿ.ವಿ.ರಾಘವೇಂದ್ರ(ಅಬಕಾರಿ ಮತ್ತು ವಾಣಿಜ್ಯ ತೆರಿಗಳ ಇಲಾಖೆ)

ಆರ್.ರಾಮಾಂಜನಯ್ಯ(ಸಹಕಾರ ಮತ್ತು ಸಹಕಾರ ಸಂಘಗಳ ಲೆಕ್ಕ ಪರಿಶೋಧನ ಇಲಾಖೆ

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

20 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago