ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನಿರ್ದೇಶಕರ ಆಯ್ಕೆ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ 34 ನಿರ್ದೇಶಕ ಸ್ಥಾನಗ ಪೈಕಿ 27 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದ 7 ಸ್ಥಾನಗಳಿಗೆ ಸೋಮವಾರ ಚುನಾವಣ ಅಧಿಕಾರಿಗಳಾದ ಆರ್.ಸುರೇಶ್, ಅನಂತಕುಮಾರ್ ಅವರ ನೇತೃತ್ವದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯಿತು.

ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಚುನಾವಣೆ ನಡೆದು, 4 ಗಂಟೆ ನಂತರ ಮತಗಳ ಎಣಿಕೆ ನಡೆಯಿತು.ಸರ್ಕಾರಿ ಪ್ರಾಥಮಿಕ ಶಾಲಾ ವಿಭಾಗದ 4 ಸ್ಥಾನಗಳಿಗೆ ಸ್ಪರ್ಧಿಸಿದ್ದವರಲ್ಲಿ ಎಂ.ಎಸ್.ರಾಜಶೇಖರ್, ವಿ.ಧನಂಜಯ,ಎಂ.ಆರ್.ಕೇಶವಮೂರ್ತಿ,ಡಿ.ಶ್ರೀಧರ್ ಆಯ್ಕೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಒಂದು ಸ್ಥಾನಕ್ಕೆ ನಡೆದ ಮತದಾನದಲ್ಲಿ ಸಿ.ಎಚ್.ರಾಮಚಂದ್ರಯ್ಯ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ವಿಭಾಗದಿಂದ ಎನ್.ಮಹೇಶ್, ಭೂ ಮಾಪನ ಇಲಾಖೆಯಿಂದ ಮಂಜುನಾಥ್ ಆಯ್ಕೆಯಾಗಿದ್ದಾರೆ.

ಅವಿರೋಧವಾಗಿ ಆಯ್ಕೆಯಾದವರು:
ಕೆ.ಎಂ.ಹರೀಶ್ ಕುಮಾರ್ (ಕೃಷಿ ಇಲಾಖೆ), ವಿ.ಸಿ.ನಾಗದೇವ(ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ)

ಬಿ.ವಿನೋದ, ಲಕ್ಷ್ಮೀನರಸಿಂಹಯ್ಯ, ಎಸ್.ಮನೋಜ (ಕಂದಾಯ ಇಲಾಖೆ)

ಎನ್.ಮಂಜುನಾಥ್ (ಲೋಕೋಪಯೋಗಿ ಇಲಾಖೆ)

ಪಿ.ಎನ್.ಪದ್ಮಾವತಿ(ಪಂಚಾಯತ್ ರಾಜ್ ಇಂಜಿನಿಯರಿಂಗ್)

ಎಂ.ಎನ್.ಚಿಕ್ಕೇಗೌಡ, ಟಿ.ಕೆ.ಪ್ರಕಾಶ್(ಸರ್ಕಾರಿ ಪ್ರೌಢ ಶಾಲಾ ವಿಭಾಗ)

ಎಸ್.ದಿವ್ಯ (ಪದವಿ ಕಾಲೇಜು ವಿಭಾಗ)

ವಿ.ಗೋವಿಂದಪ್ಪ (ಸಮಾಜ ಕಲ್ಯಾಣ ಇಲಾಖೆ)

ಎಲ್. ವೆಂಕಟೇಶ್(ಹಿಂದುಳಿದ ವರ್ಗಗಳ ಇಲಾಖೆ)

ಸಿ.ಆರ್.ಚಂದ್ರಕುಮಾರ (ಅರಣ್ಯ ಇಲಾಖೆ)

ಎಲ್.ಶ್ರೀನಿವಾಸಮೂರ್ತಿ, ಟಿ.ಆರ್.ಕುಮಾರ್, ಎಲ್.ಮಹದೇವನಾಯಕ್, ಟಿ.ಸಿ.ಅಮರೇಶ್(ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ)

ಶಶಿಕುಮಾರ್ (ತೋಟಗಾರಿಕಾ ಇಲಾಖೆ)

ಕೆ.ಎಸ್.ಸುಧಾ(ಖಜಾನೆ ಇಲಾಖೆ)

ಸುಶೀಲಕುಮಾರ್ ಕ್ಷತ್ರಿ (ನ್ಯಾಯಾಂಗ ಇಲಾಖೆ)

ಡಿ.ಬಿ.ಗಂಗಭೈರಪ್ಪ, ಬಿ.ಆರ್.ವೀಣಾ(ಗ್ರಾಮೀಣಾಭಿವೃದ್ಧಿ ಪಂಚಾಯಿತ್ ರಾಜ್ ಇಲಾಖೆ)

ಇ.ರವಿಕುಮಾರ್(ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ)

ಎಚ್.ನರಸಿಂಹಮೂರ್ತಿ(ಆಹಾರ ಮತ್ತು ನಾಗರೀಕ ಸರಬರಾಜು)

ಅಬಿದಾ ಅಂಜುಮ್(ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ)

ಬಿ.ವಿ.ರಾಘವೇಂದ್ರ(ಅಬಕಾರಿ ಮತ್ತು ವಾಣಿಜ್ಯ ತೆರಿಗಳ ಇಲಾಖೆ)

ಆರ್.ರಾಮಾಂಜನಯ್ಯ(ಸಹಕಾರ ಮತ್ತು ಸಹಕಾರ ಸಂಘಗಳ ಲೆಕ್ಕ ಪರಿಶೋಧನ ಇಲಾಖೆ

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

11 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

12 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

14 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

15 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

20 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

23 hours ago