ರಾಜ್ಯ ಸರ್ಕಾರ ಭಿಕ್ಷೆ ಪಾತ್ರೆಯನ್ನು ಇಟ್ಟುಕೊಂಡಿದೆ: ಭಿಕ್ಷೆ ಬೇಡೋದನ್ನ ಬಿಟ್ಟು ಬೇರೇನು ಮಾಡ್ತಿಲ್ಲ- ಸಂಸದ ಡಾ.ಕೆ.ಸುಧಾಕರ್

ರಾಜ್ಯ ಸರ್ಕಾರ ಭಿಕ್ಷೆ ಪಾತ್ರೆಯನ್ನು ಇಟ್ಟುಕೊಂಡಿದೆ. ಭಿಕ್ಷೆ ಬೇಡೋದನ್ನ ಬಿಟ್ಟು ಬೇರೇನು ಮಾಡ್ತಿಲ್ಲ ಅವರು. ಏಕೆಂದರೆ, ಅವರ ಖಜಾನೆ ಖಾಲಿಯಾಗಿದೆ.. ಮೆಟ್ರೋ ದರವನ್ನ ಹೆಚ್ಚು ಮಾಡಿ ಎಂದು ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದು ಯಾರು…? ನಮ್ಮ ಕೈಯಲ್ಲಿ ಮೆಟ್ರೋವನ್ನ ಸುಧಾರಣೆ, ನಿರ್ವಹಣೆ ಮಾಡೋದಕ್ಕೆ ಆಗ್ತಿಲ್ಲ ಎಂದು ಕೇಂದ್ರಕ್ಕೆ ಪತ್ರ ಬರೆದಿದ್ದು ರಾಜ್ಯ ಸರ್ಕಾರ ಅಲ್ವಾ….? ದರ ಹೆಚ್ಚಿಗೆ ಮಾಡೋದು ಬೇಡ ಎಂತಾ ನಾವು ಕೇಂದ್ರಕ್ಕೆ ಹೇಳ್ತೀವಿ..ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ಕೆಎಂಎಫ್ ಮತ್ತು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಮತ್ತು ಕೊನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ನಿನ್ನೆ (ಭಾನುವಾರ) ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆಯನ್ನು ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ವಿಬಿ–ಜಿ ರಾಮ್‌-ಜಿ ಯೋಜನೆಯಡಿಯಲ್ಲಿ 40%‌ ಹಣದಿಂದ ಗ್ರಾಮೀಣ ಕರ್ನಾಟಕ ಅಭಿವೃದ್ಧಿ ಮಾಡಬೇಕು ಎಂದು ಹೇಳ್ತೀರಾ… ಅದಕ್ಕೂ ಹಣ ಇಲ್ಲ‌‌ ನಿಮ್ಮ ಹತ್ರ… ಈ ಯೋಜನೆಯಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ನಿಗ್ರಹ ಮಾಡಿ, ತಂತ್ರಜ್ಞಾನ ಬಳಸಿ ಅಭಿವೃದ್ಧಿ ಮಾಡಲು ವಿಬಿ–ಜಿ ರಾಮ್‌-ಜಿ ಕಾಯ್ದೆ ತಂದಿದ್ದೇವೆ. ಅದಕ್ಕೆ ಕಾಂಗ್ರೆಸ್ ನವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ…ಎಂದರು.

ನರೇಗಾದಲ್ಲಿ ಮಹಾತ್ಮ ಗಾಂಧಿ ಅವರ ಹೆಸರಲ್ಲಿ ವ್ಯಾಪಕ ಭ್ರಷ್ಟಾಚಾರ ಆಗ್ತಾ ಇತ್ತು. ಇದನ್ನ ತಡೆಹಿಡಿಯಲು ವಿಬಿ–ಜಿ ರಾಮ್‌-ಜಿ ಕಾಯ್ದೆ ಜಾರಿ ಮಾಡಿದ್ದೇವೆ. ಅದಕ್ಕೆ ಅವರು ಸ್ವಾಗತ ಮಾಡಬೇಕಿತ್ತು. ಈ ವರ್ಷ ಅವರು 8 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ…ಕಳೆದ ಎರಡೂವರೆ ವರ್ಷದಲ್ಲಿ ಪ್ರತಿ ವರ್ಷ ಒಂದು ಲಕ್ಷ ಕೋಟಿ ಸಾಲ ಮಾಡಿದ್ದಾರೆ.. ಈ ರಾಜ್ಯದ ಆರ್ಥಿಕ ಶಿಸ್ತನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಎಸ್ ಎಂ ಕೃಷ್ಣಾ ರವರು ಮುಖ್ಯಮಂತ್ರಿಗಳಾಗಿದ್ದಾಗ ಇಡೀ ದೇಶದಲ್ಲಿ ಮೊದಲ ಬಾರಿಗೆ ವಿತ್ತಿಯ ಜವಾಬ್ದಾರಿ ಹೊಣಗಾರಿಕೆ ಕಾಯ್ದೆಯನ್ನು ಜಾರಿಗೆ ತಂದಿದ್ದರು.‌ ನಮ್ಮ ರಾಜ್ಯ ದೇಶಕ್ಕೆ ಮಾದರಿಯಾಗಿತ್ತು. ಆದರೆ, ಈಗಿನ ಸರ್ಕಾರ ಅದರ ಪ್ರಕಾರ ನಡೆದುಕೊಳ್ಳುತ್ತಿಲ್ಲ ಎಂದು ಹೇಳಿದರು.

ರೈತರ ಮಕ್ಕಳಿಗೆ ಸ್ಕಾಲರ್ ಶಿಪ್ ಕೊಡುವ ವಿದ್ಯಾಸಿರಿ ಯೋಜನೆಯನ್ನ ನಿಲ್ಲಿಸಿದ್ದಾರೆ. ಹಾಲಿನ‌ ದರ ಹೆಚ್ಚಿಗೆ ಮಾಡಿಲ್ಲ. ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ರೈತರಪರ ಕಾಳಜಿ ವಹಿಸಿ ಅವರ ಅಗತ್ಯತೆಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದರು..

ಈ ವೇಳೆ ಶಾಸಕ ಧೀರಜ್ ಮುನಿರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago