ರಾಜ್ಯ ಸರ್ಕಾರ ಭಿಕ್ಷೆ ಪಾತ್ರೆಯನ್ನು ಇಟ್ಟುಕೊಂಡಿದೆ: ಭಿಕ್ಷೆ ಬೇಡೋದನ್ನ ಬಿಟ್ಟು ಬೇರೇನು ಮಾಡ್ತಿಲ್ಲ- ಸಂಸದ ಡಾ.ಕೆ.ಸುಧಾಕರ್

ರಾಜ್ಯ ಸರ್ಕಾರ ಭಿಕ್ಷೆ ಪಾತ್ರೆಯನ್ನು ಇಟ್ಟುಕೊಂಡಿದೆ. ಭಿಕ್ಷೆ ಬೇಡೋದನ್ನ ಬಿಟ್ಟು ಬೇರೇನು ಮಾಡ್ತಿಲ್ಲ ಅವರು. ಏಕೆಂದರೆ, ಅವರ ಖಜಾನೆ ಖಾಲಿಯಾಗಿದೆ.. ಮೆಟ್ರೋ ದರವನ್ನ ಹೆಚ್ಚು ಮಾಡಿ ಎಂದು ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದು ಯಾರು…? ನಮ್ಮ ಕೈಯಲ್ಲಿ ಮೆಟ್ರೋವನ್ನ ಸುಧಾರಣೆ, ನಿರ್ವಹಣೆ ಮಾಡೋದಕ್ಕೆ ಆಗ್ತಿಲ್ಲ ಎಂದು ಕೇಂದ್ರಕ್ಕೆ ಪತ್ರ ಬರೆದಿದ್ದು ರಾಜ್ಯ ಸರ್ಕಾರ ಅಲ್ವಾ….? ದರ ಹೆಚ್ಚಿಗೆ ಮಾಡೋದು ಬೇಡ ಎಂತಾ ನಾವು ಕೇಂದ್ರಕ್ಕೆ ಹೇಳ್ತೀವಿ..ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ಕೆಎಂಎಫ್ ಮತ್ತು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಮತ್ತು ಕೊನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ನಿನ್ನೆ (ಭಾನುವಾರ) ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆಯನ್ನು ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ವಿಬಿ–ಜಿ ರಾಮ್‌-ಜಿ ಯೋಜನೆಯಡಿಯಲ್ಲಿ 40%‌ ಹಣದಿಂದ ಗ್ರಾಮೀಣ ಕರ್ನಾಟಕ ಅಭಿವೃದ್ಧಿ ಮಾಡಬೇಕು ಎಂದು ಹೇಳ್ತೀರಾ… ಅದಕ್ಕೂ ಹಣ ಇಲ್ಲ‌‌ ನಿಮ್ಮ ಹತ್ರ… ಈ ಯೋಜನೆಯಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ನಿಗ್ರಹ ಮಾಡಿ, ತಂತ್ರಜ್ಞಾನ ಬಳಸಿ ಅಭಿವೃದ್ಧಿ ಮಾಡಲು ವಿಬಿ–ಜಿ ರಾಮ್‌-ಜಿ ಕಾಯ್ದೆ ತಂದಿದ್ದೇವೆ. ಅದಕ್ಕೆ ಕಾಂಗ್ರೆಸ್ ನವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ…ಎಂದರು.

ನರೇಗಾದಲ್ಲಿ ಮಹಾತ್ಮ ಗಾಂಧಿ ಅವರ ಹೆಸರಲ್ಲಿ ವ್ಯಾಪಕ ಭ್ರಷ್ಟಾಚಾರ ಆಗ್ತಾ ಇತ್ತು. ಇದನ್ನ ತಡೆಹಿಡಿಯಲು ವಿಬಿ–ಜಿ ರಾಮ್‌-ಜಿ ಕಾಯ್ದೆ ಜಾರಿ ಮಾಡಿದ್ದೇವೆ. ಅದಕ್ಕೆ ಅವರು ಸ್ವಾಗತ ಮಾಡಬೇಕಿತ್ತು. ಈ ವರ್ಷ ಅವರು 8 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ…ಕಳೆದ ಎರಡೂವರೆ ವರ್ಷದಲ್ಲಿ ಪ್ರತಿ ವರ್ಷ ಒಂದು ಲಕ್ಷ ಕೋಟಿ ಸಾಲ ಮಾಡಿದ್ದಾರೆ.. ಈ ರಾಜ್ಯದ ಆರ್ಥಿಕ ಶಿಸ್ತನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಎಸ್ ಎಂ ಕೃಷ್ಣಾ ರವರು ಮುಖ್ಯಮಂತ್ರಿಗಳಾಗಿದ್ದಾಗ ಇಡೀ ದೇಶದಲ್ಲಿ ಮೊದಲ ಬಾರಿಗೆ ವಿತ್ತಿಯ ಜವಾಬ್ದಾರಿ ಹೊಣಗಾರಿಕೆ ಕಾಯ್ದೆಯನ್ನು ಜಾರಿಗೆ ತಂದಿದ್ದರು.‌ ನಮ್ಮ ರಾಜ್ಯ ದೇಶಕ್ಕೆ ಮಾದರಿಯಾಗಿತ್ತು. ಆದರೆ, ಈಗಿನ ಸರ್ಕಾರ ಅದರ ಪ್ರಕಾರ ನಡೆದುಕೊಳ್ಳುತ್ತಿಲ್ಲ ಎಂದು ಹೇಳಿದರು.

ರೈತರ ಮಕ್ಕಳಿಗೆ ಸ್ಕಾಲರ್ ಶಿಪ್ ಕೊಡುವ ವಿದ್ಯಾಸಿರಿ ಯೋಜನೆಯನ್ನ ನಿಲ್ಲಿಸಿದ್ದಾರೆ. ಹಾಲಿನ‌ ದರ ಹೆಚ್ಚಿಗೆ ಮಾಡಿಲ್ಲ. ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ರೈತರಪರ ಕಾಳಜಿ ವಹಿಸಿ ಅವರ ಅಗತ್ಯತೆಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದರು..

ಈ ವೇಳೆ ಶಾಸಕ ಧೀರಜ್ ಮುನಿರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

14 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

15 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

18 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

1 day ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

2 days ago