ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಯನ್ನ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವ ಎಂಟಿಬಿ ನಾಗರಾಜ್ ಸೇರಿದಂತೆ ಬಿಜೆಪಿ ನಾಯಕರು, ಮುಖಂಡರು ಭಾಗವಹಿಸಲಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಈಡೇರಿಸುವಲ್ಲಿ ಸೋತಿದೆ. ಗ್ಯಾರೆಂಟಿ ಎಂಬ ಅಸ್ತ್ರ ಬಳಸಿ ಚುನಾವಣೆ ಗೆದ್ದ ಕಾಂಗ್ರೆಸ್ ಸರ್ಕಾರ ಜನರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು.
ತಾಲ್ಲೂಕಿಗೆ ಮಂಜೂರಾಗಿರುವ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣ ವಿಳಂಬವಾಗಿದೆ. ತಾಲ್ಲೂಕಿನಲ್ಲಿ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದೇವೆ. ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಹಾರಿಸಿದವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಸರ್ಕಾರದ ದುರಾಡಳಿತ ಖಂಡಿಸಿ ಬೆಳಿಗ್ಗೆ 10 ಕ್ಕೆ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.
ನಂತರ ಜಿಲ್ಲಾ ವಕ್ತರರಾದ ಪುಷ್ಪ ಶಿವಶಂಕರ್ ಮಾತನಾಡಿ, ತಾಲ್ಲೂಕಿನಲ್ಲಿ ಹಲವು ಸಮಸ್ಯೆಗಳಿದ್ದು, ಸರಿಪಡಿಸುವಲ್ಲಿ ನಮ್ಮೆಲ್ಲರ ಭಾಗವಹಿಸುವಿಕೆಯ ಅವಶ್ಯಕತೆ ಇದೆ. ಜಿಲ್ಲೆಯ ನಾಲ್ಕು ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಉಮಾ ಮಹೇಶ್ವರಿ , ನಗರಸಭಾ ಅಧ್ಯಕ್ಷರಾದ ಸುಧಾರಾಣಿ ಲಕ್ಷ್ಮಿ ನಾರಾಯಣ , ಸದಸ್ಯರಾದ ನಾಗರತ್ನಮ್ಮ , ವತ್ಸಲಾ, ಪ್ರಧಾನ ಕಾರ್ಯದರ್ಶಿ ಗೋಪಿ, ಮುಖಂಡರಾದ ಜಗನ್ನಾಥ್, ಲಕ್ಷ್ಮಿ ನಾರಾಯಣ್, ಮತ್ತಿತರರು ಉಪಸ್ಥಿತರಿದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…