ರಾಜ್ಯ ಸರ್ಕಾರ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಯನ್ನ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ‌ ಸಚಿವ ಎಂಟಿಬಿ ನಾಗರಾಜ್ ಸೇರಿದಂತೆ ಬಿಜೆಪಿ ನಾಯಕರು, ಮುಖಂಡರು ಭಾಗವಹಿಸಲಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಈಡೇರಿಸುವಲ್ಲಿ ಸೋತಿದೆ. ಗ್ಯಾರೆಂಟಿ ಎಂಬ ಅಸ್ತ್ರ ಬಳಸಿ ಚುನಾವಣೆ ಗೆದ್ದ ಕಾಂಗ್ರೆಸ್ ಸರ್ಕಾರ ಜನರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು.

ತಾಲ್ಲೂಕಿಗೆ ಮಂಜೂರಾಗಿರುವ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣ ವಿಳಂಬವಾಗಿದೆ. ತಾಲ್ಲೂಕಿನಲ್ಲಿ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದೇವೆ. ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಹಾರಿಸಿದವರ‌ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಸರ್ಕಾರದ ದುರಾಡಳಿತ ಖಂಡಿಸಿ ಬೆಳಿಗ್ಗೆ 10 ಕ್ಕೆ‌ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ನಂತರ ಜಿಲ್ಲಾ ವಕ್ತರರಾದ ಪುಷ್ಪ ಶಿವಶಂಕರ್ ಮಾತನಾಡಿ, ತಾಲ್ಲೂಕಿನಲ್ಲಿ ಹಲವು ಸಮಸ್ಯೆಗಳಿದ್ದು, ಸರಿಪಡಿಸುವಲ್ಲಿ ನಮ್ಮೆಲ್ಲರ ಭಾಗವಹಿಸುವಿಕೆಯ ಅವಶ್ಯಕತೆ ಇದೆ. ಜಿಲ್ಲೆಯ ನಾಲ್ಕು ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಉಮಾ ಮಹೇಶ್ವರಿ , ನಗರಸಭಾ ಅಧ್ಯಕ್ಷರಾದ ಸುಧಾರಾಣಿ ಲಕ್ಷ್ಮಿ ನಾರಾಯಣ , ಸದಸ್ಯರಾದ ನಾಗರತ್ನಮ್ಮ , ವತ್ಸಲಾ, ಪ್ರಧಾನ ಕಾರ್ಯದರ್ಶಿ ಗೋಪಿ, ಮುಖಂಡರಾದ ಜಗನ್ನಾಥ್, ಲಕ್ಷ್ಮಿ ನಾರಾಯಣ್, ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

35 seconds ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

28 minutes ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

4 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

6 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

19 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

19 hours ago