ರಾಜ್ಯ ಸರ್ಕಾರ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಯನ್ನ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ‌ ಸಚಿವ ಎಂಟಿಬಿ ನಾಗರಾಜ್ ಸೇರಿದಂತೆ ಬಿಜೆಪಿ ನಾಯಕರು, ಮುಖಂಡರು ಭಾಗವಹಿಸಲಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಈಡೇರಿಸುವಲ್ಲಿ ಸೋತಿದೆ. ಗ್ಯಾರೆಂಟಿ ಎಂಬ ಅಸ್ತ್ರ ಬಳಸಿ ಚುನಾವಣೆ ಗೆದ್ದ ಕಾಂಗ್ರೆಸ್ ಸರ್ಕಾರ ಜನರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು.

ತಾಲ್ಲೂಕಿಗೆ ಮಂಜೂರಾಗಿರುವ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣ ವಿಳಂಬವಾಗಿದೆ. ತಾಲ್ಲೂಕಿನಲ್ಲಿ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದೇವೆ. ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಹಾರಿಸಿದವರ‌ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಸರ್ಕಾರದ ದುರಾಡಳಿತ ಖಂಡಿಸಿ ಬೆಳಿಗ್ಗೆ 10 ಕ್ಕೆ‌ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ನಂತರ ಜಿಲ್ಲಾ ವಕ್ತರರಾದ ಪುಷ್ಪ ಶಿವಶಂಕರ್ ಮಾತನಾಡಿ, ತಾಲ್ಲೂಕಿನಲ್ಲಿ ಹಲವು ಸಮಸ್ಯೆಗಳಿದ್ದು, ಸರಿಪಡಿಸುವಲ್ಲಿ ನಮ್ಮೆಲ್ಲರ ಭಾಗವಹಿಸುವಿಕೆಯ ಅವಶ್ಯಕತೆ ಇದೆ. ಜಿಲ್ಲೆಯ ನಾಲ್ಕು ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಉಮಾ ಮಹೇಶ್ವರಿ , ನಗರಸಭಾ ಅಧ್ಯಕ್ಷರಾದ ಸುಧಾರಾಣಿ ಲಕ್ಷ್ಮಿ ನಾರಾಯಣ , ಸದಸ್ಯರಾದ ನಾಗರತ್ನಮ್ಮ , ವತ್ಸಲಾ, ಪ್ರಧಾನ ಕಾರ್ಯದರ್ಶಿ ಗೋಪಿ, ಮುಖಂಡರಾದ ಜಗನ್ನಾಥ್, ಲಕ್ಷ್ಮಿ ನಾರಾಯಣ್, ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

12 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

16 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago