ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ

ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇಂದು ಆದೇಶ ಪ್ರಕಟಿಸಿದೆ.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತು.

ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.

ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.

*ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು* ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.

Ramesh Babu

Journalist

Recent Posts

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

7 hours ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

11 hours ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

11 hours ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

13 hours ago

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……

ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…

2 days ago

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…

2 days ago