ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ

ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇಂದು ಆದೇಶ ಪ್ರಕಟಿಸಿದೆ.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತು.

ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.

ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.

*ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು* ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.

Ramesh Babu

Journalist

Recent Posts

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

25 minutes ago

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

2 hours ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

19 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago