ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣ ಸಮೀಪದಲ್ಲಿರುವ ರೈಲ್ವೆ ಅಂಡರ್ ಪಾಸ್ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಮಳೆ ಬಂದರೆ ಅಂಡರ್ ಪಾಸ್ ತುಂಬಾ ನೀರು ನಿಂತು ಕೆಸರು ಗದ್ದೆ, ಕೆರೆಯಂತಾಗಿ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗುತ್ತದೆ…. ಈ ಹಿನ್ನೆಲೆ ಇಂದು ಶಾಸಕ ಧೀರಜ್ ಮುನಿರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿಯು ದೊಡ್ಡಬಳ್ಳಾಪುರ ಮೂಲಕ ಹಾದು ಹೋಗುತ್ತದೆ. ಇದು ಟೋಲ್ ರಸ್ತೆ ಆಗಿರುವುದರಿಂದ ಟೋಲ್ ವಸೂಲಾತಿ ದಿನೇ ದಿನೇ ಹೆಚ್ಚಾಗುತ್ತಿದೆ… ಟೋಲ್ ವಸೂಲಿ ಮಾಡುತ್ತಿರುವವರು ರಸ್ತೆ ಅಭಿವೃದ್ಧಿ, ರಸ್ತೆ ದುರಸ್ತಿ, ಎಲ್ಲಾ ಜಂಕ್ಷನ್ ಗಳಲ್ಲಿ ಹೈ-ಮಾಸ್ಟ್ ಲೈಟ್, ಸೂಚನಾ ಫಲಕಗಳು ಸೇರಿದಂತೆ ಇನ್ನಿತರೆ ಸುಗಮ ಸಂಚಾರಕ್ಕೆ ಬೇಕಾಗುವ ಸವಲತ್ತುಗಳನ್ನು ಒದಗಿಸಬೇಕು. ಆದರೆ, ಇದನ್ನು ಯಾವುದೂ ಮಾಡದೇ ಹಣ ವಸೂಲಿ ಮಾಡಿಕೊಂಡು ತೆಪ್ಪಗಿದ್ದಾರೆ. ಟೋಲ್ ವಸೂಲಿ ಮಾಡುವವರಿಗೆ ಹತ್ತು ವಾರ ಗಡುವು ನೀಡುತ್ತೇನೆ, ಸೂಕ್ತ ರೀತಿಯಲ್ಲಿ ಕೆಲಸ ಮಾಡದಿದ್ದರೆ, ಜುಲೈ ಅಧಿವೇಶನ ನಂತರ ನನ್ನ ಮೇಲೆ ಕೇಸ್ ಆದರೂ ಚಿಂತೆ ಇಲ್ಲ ಟೋಲ್ ವಸೂಲಿಯನ್ನು ನಿಲ್ಲಿಸುತ್ತೇನೆ ಎಂದು ಎಚ್ಚರಿಸಿದರು….
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…