ದೊಡ್ಡಬಳ್ಳಾಪುರ: ಅ.9ರ ಗುರುವಾರ ರಾತ್ರಿ 11ಗಂಟೆ ಸುಮಾರಿನಲ್ಲಿ ಅಂಗಡಿ ಮುಚ್ಚುವ ವೇಳೆ ಯುವಕನಿಗೆ ವಿದ್ಯುತ್ ಸ್ಪರ್ಶವಾಗಿದ್ದು, ಈ ವೇಳೆ ಯುವಕನಿಗೆ ಸುಟ್ಟಗಾಯಗಳಾಗಿದ್ದವು. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ಲಕ್ಷ್ಮೀ ಟಾಕಿಸ್ ರಸ್ತೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಶ್ರೀನಗರ ನಿವಾಸಿ ಆರ್ಕೆಶ್ ಕುಮಾರ್ (ಕುಮಾರ್ ಗೋಬಿ 27 ವರ್ಷ) ಎಂದು ಗುರುತಿಸಲಾಗಿದೆ.
ಲಕ್ಷ್ಮೀ ಟಾಕಿಸ್ ರಸ್ತೆಯಲ್ಲಿ ಹಲವು ವರ್ಷಗಳಿಂದ ಗೋಬಿ ಮಾರಾಟ ಮಾಡುತ್ತಿದ್ದ ಯುವಕ ಗುರುವಾರ ರಾತ್ರಿ 11 ರ ಸುಮಾರಿಗೆ ಅಂಗಡಿಯ ಕಬ್ಬಿಣದ ಶೆಟರ್ ಕೆಳಕ್ಕೆ ಎಳೆಯುವ ವೇಳೆ ತುಂಟಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದೆ. ಈ ವೇಳೆ ಯುವಕ ಗಂಭೀರವಾಗಿ ಗಾಯಗೊಂಡಿದ್ದನು. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ನಗರ ಪೊಲೀಸ್ ಠಾಣಾ ಇನ್ಸೆಕ್ಟರ್ ಅಮರೇಶ್ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…