ದೊಡ್ಡಬಳ್ಳಾಪುರ: ಅ.9ರ ಗುರುವಾರ ರಾತ್ರಿ 11ಗಂಟೆ ಸುಮಾರಿನಲ್ಲಿ ಅಂಗಡಿ ಮುಚ್ಚುವ ವೇಳೆ ಯುವಕನಿಗೆ ವಿದ್ಯುತ್ ಸ್ಪರ್ಶವಾಗಿದ್ದು, ಈ ವೇಳೆ ಯುವಕನಿಗೆ ಸುಟ್ಟಗಾಯಗಳಾಗಿದ್ದವು. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ಲಕ್ಷ್ಮೀ ಟಾಕಿಸ್ ರಸ್ತೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಶ್ರೀನಗರ ನಿವಾಸಿ ಆರ್ಕೆಶ್ ಕುಮಾರ್ (ಕುಮಾರ್ ಗೋಬಿ 27 ವರ್ಷ) ಎಂದು ಗುರುತಿಸಲಾಗಿದೆ.
ಲಕ್ಷ್ಮೀ ಟಾಕಿಸ್ ರಸ್ತೆಯಲ್ಲಿ ಹಲವು ವರ್ಷಗಳಿಂದ ಗೋಬಿ ಮಾರಾಟ ಮಾಡುತ್ತಿದ್ದ ಯುವಕ ಗುರುವಾರ ರಾತ್ರಿ 11 ರ ಸುಮಾರಿಗೆ ಅಂಗಡಿಯ ಕಬ್ಬಿಣದ ಶೆಟರ್ ಕೆಳಕ್ಕೆ ಎಳೆಯುವ ವೇಳೆ ತುಂಟಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದೆ. ಈ ವೇಳೆ ಯುವಕ ಗಂಭೀರವಾಗಿ ಗಾಯಗೊಂಡಿದ್ದನು. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ನಗರ ಪೊಲೀಸ್ ಠಾಣಾ ಇನ್ಸೆಕ್ಟರ್ ಅಮರೇಶ್ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…