ರಾತ್ರಿ ವೇಳೆ ದೊಡ್ಡಬಳ್ಳಾಪುರ ನಗರದ ವಿವಿಧ ಅಂಗಡಿಗಳಿಗೆ ಲಗ್ಗೆ ಇಡುವ ಕಳ್ಳರು. ಕಳ್ಳರ ಹಾವಳಿಯಿಂದ ಭಯಭೀತರಾಗಿರುವ ವ್ಯಾಪಾರಿಗಳು, ಅಂಗಡಿ ಮಾಲೀಕರು.
ದೊಡ್ಡಬಳ್ಳಾಪುರ ನಗರದ ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಫರ್ನೀಚರ್ಸ್ ಹಾಗೂ ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ಯತ್ನ ಕಳೆದ ರಾತ್ರಿ ನಡೆದಿದೆ.
ಅಂಗಡಿಗಳ ಮೇಲ್ಛಾವಣಿಯ ಶೀಟ್ ಗಳನ್ನು ಕೊರೆದು ಒಳ ಹೋಗಿ ಹಣ, ವಸ್ತುಗಳನ್ನು ಎಗರಿಸಲು ಕಳ್ಳರು ಯತ್ನಿಸಿದ್ದಾರೆ.
ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು. ಕೂಡಲೇ ಕಳ್ಳರ ಜಾಡು ಹಿಡಿದು ಬಂಧಿಸಿ, ಇನ್ನುಮುಂದೆ ಯಾವುದೇ ಕಳ್ಳತನದ ಕೃತ್ಯಗಳು ಮರುಕಳಿಸದಂತೆ ಎಚ್ವರವಹಿಸಬೇಕು ಎಂದು ಅಂಗಡಿ ಮಾಲೀಕರು, ವ್ಯಾಪಾರಿಗಳು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…