ರಾತ್ರಿ ವೇಳೆ ಎಲ್ಲೆಂದರಲ್ಲಿ ಕಾರು, ಬೈಕ್ ನಿಲ್ಲಿಸಬೇಡಿ:  ಚಿನ್ನಾಭರಣ, ನಗದು ದೋಚಲು ಕಳ್ಳಕಾಕರು ಹೊಂಚಾಕಿ ಕಾದು ಕುಳಿತಿರುತ್ತಾರೆ…. ಹುಷಾರ್….!

ಜೂ.7ರ ಮುಂಜಾನೆ 2ಗಂಟೆ ಸುಮಾರಿನಲ್ಲಿ ಬೆಂಗಳೂರಿನಿಂದ ದೇವನಹಳ್ಳಿ‌ ಮಾರ್ಗವಾಗಿ ನಂದಿ ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಕಾರನ್ನು ರಸ್ತೆ ಪಕ್ಕ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿ ಮೇಲೆ ಮೂವರು ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ವ್ಯಕ್ತಿಯನ್ನು ಬಿಗಿಯಾಗಿ ಹಿಡಿದುಕೊಂಡು ಹಲ್ಲೆ ಮಾಡಿ, ಕತ್ತಲ್ಲಿದ್ದ 12 ಗ್ರಾಂ ತೂಕದ ಸಾದಾ ಚಿನ್ನದ ಚೈನ್, ಕಾರಿನ ಡ್ಯಾಶ್ ಬೋರ್ಡ್ ನಲ್ಲಿದ್ದ ಸುಮಾರು 4-5 ಗ್ರಾಂ ತೂಕದ ಗುಂಡಾದ ಒಂದು ಜೊತೆ ಓಲೆಗಳು, ಫೋನ್ ಪೇ ಮೂಲಕ 24,753/-ರೂ. ಗಳನ್ನು ವರ್ಗಾಯಿಸಿಕೊಂಡು ಕಾಲ್ಕಿತ್ತಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ, ಖದೀಮರ ಬೆನ್ನತ್ತಿ, ತ್ವರಿತಗತಿಯಲ್ಲಿ ಕಳ್ಳರನ್ನು ಬಂಧಿಸಿ, ಕಳವು ಮಾಡಿದ್ದ ಚಿನ್ನಾಭರಣ ಹಾಗೂ ನಗದನ್ನು ವಶಕ್ಕೆ ಪಡೆದು ದೂರುದಾರನಿಗೆ ಹಿಂದಿರುಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

ಪ್ರೇಮ್ ಕುಮಾರ್(24), ದುರ್ಗಪ್ರಸಾದ್(22), ಅರುಣ್(26) ಬಂಧಿತ ಆರೋಪಿಗಳು…

ಘಟನೆ ವಿವರ…..

ವ್ಯಕ್ತಿಯೋರ್ವ ಕಾರಿನಲ್ಲಿ ಬೆಂಗಳೂರಿನಿಂದ ನಂದಿ ಬೆಟ್ಟಕ್ಕೆ ಹೋಗಲು ಜೂ.6ರ ರಾತ್ರಿ ಸುಮಾರು 11:30ಕ್ಕೆ ಮನೆ ಬಿಟ್ಟು, ದೇವನಹಳ್ಳಿ ಮಾರ್ಗವಾಗಿ ಹೋಗುವ ವೇಳೆ ಅರ್ಧದಾರಿಯಲ್ಲಿ ಮೂತ್ರ ವಿಸರ್ಜನೆ ಮಾಡಲೆಂದು ನಂದಿಬೆಟ್ಟ ಇನ್ನೂ 1-2 ಕಿ.ಮೀ. ದೂರವಿರುವಾಗಲೇ ಕಾರನ್ನು ಜೂ.7ರ ಮುಂಜಾನೆ ಸುಮಾರು 2 ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಣಿವೇಪುರ ಗ್ರಾಮದ ಆಕಾಶ್ ಧಮ್ ಬಿರಿಯಾನಿ ಸೆಂಟರ್ ಸಮೀಪ ರಸ್ತೆ ಪಕ್ಕದಲ್ಲಿ ಕಾರನ್ನು ನಿಲ್ಲಿಸಿ ಮೂತ್ರ ವಿಸರ್ಜನೆಗೆ ಹೋಗಿದ್ದಾರೆ. ಈ ವೇಳೆ ಯಾರೋ ಮೂವರು ದುಷ್ಕರ್ಮಿಗಳು ನಂಬರ್ ಪ್ಲೇಟ್ ಇಲ್ಲದ ಬೈಕಿನಲ್ಲಿ ಬಂದು ಆ ವ್ಯಕ್ತಿತನ್ನು ಹಿಡಿದುಕೊಂಡು ಬೆದರಿಸಿ ಕೈಯಿಂದ ಹೊಡೆದು ಅತನ ಕತ್ತಿನಲ್ಲಿದ್ದ ಭಾವಿ ಪತ್ನಿಗೆ ಎಂದು ಖರೀದಿಸಿದ ಸುಮಾರು 12 ಗ್ರಾಂ ತೂಕದ ಸಾದಾ ಚಿನ್ನದ ಚೈನ್ ಕಿತ್ತುಕೊಂಡು, ಕಾರಿನ ಡ್ಯಾಶ್ ಬೋರ್ಡ್ ನಲ್ಲಿದ್ದ ಭಾವಿ ಪತ್ನಿಗೆ ಎಂದು ಖರೀದಿಸಿ ಇಟ್ಟಿದ್ದ ಸುಮಾರು 4-5 ಗ್ರಾಂ ತೂಕದ ಗುಂಡಾದ ಒಂದು ಜೊತೆ ಓಲೆಗಳನ್ನು ದೋಚಿ, ಇನ್ನೂ ಹೆಚ್ಚಿಗೆ ಹಣ ಕೊಡು ಇಲ್ಲದಿದ್ದರೆ ಹೊಡೆಯುವುದಾಗಿ ಬೆದರಿಕೆ ಹಾಕಿ ಆತನ ಬಳಿಯಿದ್ದ ಮೊಬೈಲ್ ನ್ನು ತೆಗೆದುಕೊಂಡು ಅದರ ಪಾಸ್ ವರ್ಡ್ ನ್ನು ದೂರುದಾರನಿಂದ ಪಡೆದುಕೊಂಡು ಮೊಬೈಲ್ ನಿಂದ ಒಂದು ಬಾರಿ ರೂ.23,000/-ರೂ. ಗಳನ್ನು ಮತ್ತೊಂದು ಬಾರಿ 1753/- ರೂ.ಗಳನ್ನು ಪೋನ್ ಪೇ ಮೂಲಕ ಒಟ್ಟು ರೂ. 24,753/-ರೂ. ಗಳನ್ನು ಅವರ ನಂಬರ್ ಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.

ಆತ ಭಯಗೊಂಡು ವಾಪಸ್ಸು ಬೆಂಗಳೂರಿಗೆ ಹೋಗಿ ಆತನ ಕುಟುಂಬದವರಿಗೆ ಕೃತ್ಯ ನಡೆದ ಬಗ್ಗೆ ಹೇಳಿ ಜೂ.8ರಂದು ದೊಡ್ಡಬಳ್ಳಾಪುರ ಠಾಣೆಗೆ ಬಂದು ದೂರು ನೀಡುದ್ದಾರೆ‌.

ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ ಆರೋಪಿಗಳನ್ನು ವಶಕ್ಕೆ ಪಡೆದು, ದೋಚಿದ್ದ ಚಿನ್ನಾಭರಣ, ನಗದು ಜಪ್ತಿ ಮಾಡಿಕೊಂಡು ದೂರುದಾರನಿಗೆ ವಾಪಸ್ ನೀಡಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ….

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

5 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

6 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

7 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

8 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

15 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago