ರಾತ್ರಿ ವೇಳೆ ಎಲ್ಲೆಂದರಲ್ಲಿ ಕಾರು, ಬೈಕ್ ನಿಲ್ಲಿಸಬೇಡಿ:  ಚಿನ್ನಾಭರಣ, ನಗದು ದೋಚಲು ಕಳ್ಳಕಾಕರು ಹೊಂಚಾಕಿ ಕಾದು ಕುಳಿತಿರುತ್ತಾರೆ…. ಹುಷಾರ್….!

ಜೂ.7ರ ಮುಂಜಾನೆ 2ಗಂಟೆ ಸುಮಾರಿನಲ್ಲಿ ಬೆಂಗಳೂರಿನಿಂದ ದೇವನಹಳ್ಳಿ‌ ಮಾರ್ಗವಾಗಿ ನಂದಿ ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಕಾರನ್ನು ರಸ್ತೆ ಪಕ್ಕ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿ ಮೇಲೆ ಮೂವರು ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ವ್ಯಕ್ತಿಯನ್ನು ಬಿಗಿಯಾಗಿ ಹಿಡಿದುಕೊಂಡು ಹಲ್ಲೆ ಮಾಡಿ, ಕತ್ತಲ್ಲಿದ್ದ 12 ಗ್ರಾಂ ತೂಕದ ಸಾದಾ ಚಿನ್ನದ ಚೈನ್, ಕಾರಿನ ಡ್ಯಾಶ್ ಬೋರ್ಡ್ ನಲ್ಲಿದ್ದ ಸುಮಾರು 4-5 ಗ್ರಾಂ ತೂಕದ ಗುಂಡಾದ ಒಂದು ಜೊತೆ ಓಲೆಗಳು, ಫೋನ್ ಪೇ ಮೂಲಕ 24,753/-ರೂ. ಗಳನ್ನು ವರ್ಗಾಯಿಸಿಕೊಂಡು ಕಾಲ್ಕಿತ್ತಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ, ಖದೀಮರ ಬೆನ್ನತ್ತಿ, ತ್ವರಿತಗತಿಯಲ್ಲಿ ಕಳ್ಳರನ್ನು ಬಂಧಿಸಿ, ಕಳವು ಮಾಡಿದ್ದ ಚಿನ್ನಾಭರಣ ಹಾಗೂ ನಗದನ್ನು ವಶಕ್ಕೆ ಪಡೆದು ದೂರುದಾರನಿಗೆ ಹಿಂದಿರುಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

ಪ್ರೇಮ್ ಕುಮಾರ್(24), ದುರ್ಗಪ್ರಸಾದ್(22), ಅರುಣ್(26) ಬಂಧಿತ ಆರೋಪಿಗಳು…

ಘಟನೆ ವಿವರ…..

ವ್ಯಕ್ತಿಯೋರ್ವ ಕಾರಿನಲ್ಲಿ ಬೆಂಗಳೂರಿನಿಂದ ನಂದಿ ಬೆಟ್ಟಕ್ಕೆ ಹೋಗಲು ಜೂ.6ರ ರಾತ್ರಿ ಸುಮಾರು 11:30ಕ್ಕೆ ಮನೆ ಬಿಟ್ಟು, ದೇವನಹಳ್ಳಿ ಮಾರ್ಗವಾಗಿ ಹೋಗುವ ವೇಳೆ ಅರ್ಧದಾರಿಯಲ್ಲಿ ಮೂತ್ರ ವಿಸರ್ಜನೆ ಮಾಡಲೆಂದು ನಂದಿಬೆಟ್ಟ ಇನ್ನೂ 1-2 ಕಿ.ಮೀ. ದೂರವಿರುವಾಗಲೇ ಕಾರನ್ನು ಜೂ.7ರ ಮುಂಜಾನೆ ಸುಮಾರು 2 ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಣಿವೇಪುರ ಗ್ರಾಮದ ಆಕಾಶ್ ಧಮ್ ಬಿರಿಯಾನಿ ಸೆಂಟರ್ ಸಮೀಪ ರಸ್ತೆ ಪಕ್ಕದಲ್ಲಿ ಕಾರನ್ನು ನಿಲ್ಲಿಸಿ ಮೂತ್ರ ವಿಸರ್ಜನೆಗೆ ಹೋಗಿದ್ದಾರೆ. ಈ ವೇಳೆ ಯಾರೋ ಮೂವರು ದುಷ್ಕರ್ಮಿಗಳು ನಂಬರ್ ಪ್ಲೇಟ್ ಇಲ್ಲದ ಬೈಕಿನಲ್ಲಿ ಬಂದು ಆ ವ್ಯಕ್ತಿತನ್ನು ಹಿಡಿದುಕೊಂಡು ಬೆದರಿಸಿ ಕೈಯಿಂದ ಹೊಡೆದು ಅತನ ಕತ್ತಿನಲ್ಲಿದ್ದ ಭಾವಿ ಪತ್ನಿಗೆ ಎಂದು ಖರೀದಿಸಿದ ಸುಮಾರು 12 ಗ್ರಾಂ ತೂಕದ ಸಾದಾ ಚಿನ್ನದ ಚೈನ್ ಕಿತ್ತುಕೊಂಡು, ಕಾರಿನ ಡ್ಯಾಶ್ ಬೋರ್ಡ್ ನಲ್ಲಿದ್ದ ಭಾವಿ ಪತ್ನಿಗೆ ಎಂದು ಖರೀದಿಸಿ ಇಟ್ಟಿದ್ದ ಸುಮಾರು 4-5 ಗ್ರಾಂ ತೂಕದ ಗುಂಡಾದ ಒಂದು ಜೊತೆ ಓಲೆಗಳನ್ನು ದೋಚಿ, ಇನ್ನೂ ಹೆಚ್ಚಿಗೆ ಹಣ ಕೊಡು ಇಲ್ಲದಿದ್ದರೆ ಹೊಡೆಯುವುದಾಗಿ ಬೆದರಿಕೆ ಹಾಕಿ ಆತನ ಬಳಿಯಿದ್ದ ಮೊಬೈಲ್ ನ್ನು ತೆಗೆದುಕೊಂಡು ಅದರ ಪಾಸ್ ವರ್ಡ್ ನ್ನು ದೂರುದಾರನಿಂದ ಪಡೆದುಕೊಂಡು ಮೊಬೈಲ್ ನಿಂದ ಒಂದು ಬಾರಿ ರೂ.23,000/-ರೂ. ಗಳನ್ನು ಮತ್ತೊಂದು ಬಾರಿ 1753/- ರೂ.ಗಳನ್ನು ಪೋನ್ ಪೇ ಮೂಲಕ ಒಟ್ಟು ರೂ. 24,753/-ರೂ. ಗಳನ್ನು ಅವರ ನಂಬರ್ ಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.

ಆತ ಭಯಗೊಂಡು ವಾಪಸ್ಸು ಬೆಂಗಳೂರಿಗೆ ಹೋಗಿ ಆತನ ಕುಟುಂಬದವರಿಗೆ ಕೃತ್ಯ ನಡೆದ ಬಗ್ಗೆ ಹೇಳಿ ಜೂ.8ರಂದು ದೊಡ್ಡಬಳ್ಳಾಪುರ ಠಾಣೆಗೆ ಬಂದು ದೂರು ನೀಡುದ್ದಾರೆ‌.

ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ ಆರೋಪಿಗಳನ್ನು ವಶಕ್ಕೆ ಪಡೆದು, ದೋಚಿದ್ದ ಚಿನ್ನಾಭರಣ, ನಗದು ಜಪ್ತಿ ಮಾಡಿಕೊಂಡು ದೂರುದಾರನಿಗೆ ವಾಪಸ್ ನೀಡಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ….

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

10 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

17 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

18 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago