ರಾತ್ರಿ ವೇಳೆ ಎಲ್ಲೆಂದರಲ್ಲಿ ಕಾರು, ಬೈಕ್ ನಿಲ್ಲಿಸಬೇಡಿ:  ಚಿನ್ನಾಭರಣ, ನಗದು ದೋಚಲು ಕಳ್ಳಕಾಕರು ಹೊಂಚಾಕಿ ಕಾದು ಕುಳಿತಿರುತ್ತಾರೆ…. ಹುಷಾರ್….!

ಜೂ.7ರ ಮುಂಜಾನೆ 2ಗಂಟೆ ಸುಮಾರಿನಲ್ಲಿ ಬೆಂಗಳೂರಿನಿಂದ ದೇವನಹಳ್ಳಿ‌ ಮಾರ್ಗವಾಗಿ ನಂದಿ ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಕಾರನ್ನು ರಸ್ತೆ ಪಕ್ಕ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿ ಮೇಲೆ ಮೂವರು ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ವ್ಯಕ್ತಿಯನ್ನು ಬಿಗಿಯಾಗಿ ಹಿಡಿದುಕೊಂಡು ಹಲ್ಲೆ ಮಾಡಿ, ಕತ್ತಲ್ಲಿದ್ದ 12 ಗ್ರಾಂ ತೂಕದ ಸಾದಾ ಚಿನ್ನದ ಚೈನ್, ಕಾರಿನ ಡ್ಯಾಶ್ ಬೋರ್ಡ್ ನಲ್ಲಿದ್ದ ಸುಮಾರು 4-5 ಗ್ರಾಂ ತೂಕದ ಗುಂಡಾದ ಒಂದು ಜೊತೆ ಓಲೆಗಳು, ಫೋನ್ ಪೇ ಮೂಲಕ 24,753/-ರೂ. ಗಳನ್ನು ವರ್ಗಾಯಿಸಿಕೊಂಡು ಕಾಲ್ಕಿತ್ತಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ, ಖದೀಮರ ಬೆನ್ನತ್ತಿ, ತ್ವರಿತಗತಿಯಲ್ಲಿ ಕಳ್ಳರನ್ನು ಬಂಧಿಸಿ, ಕಳವು ಮಾಡಿದ್ದ ಚಿನ್ನಾಭರಣ ಹಾಗೂ ನಗದನ್ನು ವಶಕ್ಕೆ ಪಡೆದು ದೂರುದಾರನಿಗೆ ಹಿಂದಿರುಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

ಪ್ರೇಮ್ ಕುಮಾರ್(24), ದುರ್ಗಪ್ರಸಾದ್(22), ಅರುಣ್(26) ಬಂಧಿತ ಆರೋಪಿಗಳು…

ಘಟನೆ ವಿವರ…..

ವ್ಯಕ್ತಿಯೋರ್ವ ಕಾರಿನಲ್ಲಿ ಬೆಂಗಳೂರಿನಿಂದ ನಂದಿ ಬೆಟ್ಟಕ್ಕೆ ಹೋಗಲು ಜೂ.6ರ ರಾತ್ರಿ ಸುಮಾರು 11:30ಕ್ಕೆ ಮನೆ ಬಿಟ್ಟು, ದೇವನಹಳ್ಳಿ ಮಾರ್ಗವಾಗಿ ಹೋಗುವ ವೇಳೆ ಅರ್ಧದಾರಿಯಲ್ಲಿ ಮೂತ್ರ ವಿಸರ್ಜನೆ ಮಾಡಲೆಂದು ನಂದಿಬೆಟ್ಟ ಇನ್ನೂ 1-2 ಕಿ.ಮೀ. ದೂರವಿರುವಾಗಲೇ ಕಾರನ್ನು ಜೂ.7ರ ಮುಂಜಾನೆ ಸುಮಾರು 2 ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಣಿವೇಪುರ ಗ್ರಾಮದ ಆಕಾಶ್ ಧಮ್ ಬಿರಿಯಾನಿ ಸೆಂಟರ್ ಸಮೀಪ ರಸ್ತೆ ಪಕ್ಕದಲ್ಲಿ ಕಾರನ್ನು ನಿಲ್ಲಿಸಿ ಮೂತ್ರ ವಿಸರ್ಜನೆಗೆ ಹೋಗಿದ್ದಾರೆ. ಈ ವೇಳೆ ಯಾರೋ ಮೂವರು ದುಷ್ಕರ್ಮಿಗಳು ನಂಬರ್ ಪ್ಲೇಟ್ ಇಲ್ಲದ ಬೈಕಿನಲ್ಲಿ ಬಂದು ಆ ವ್ಯಕ್ತಿತನ್ನು ಹಿಡಿದುಕೊಂಡು ಬೆದರಿಸಿ ಕೈಯಿಂದ ಹೊಡೆದು ಅತನ ಕತ್ತಿನಲ್ಲಿದ್ದ ಭಾವಿ ಪತ್ನಿಗೆ ಎಂದು ಖರೀದಿಸಿದ ಸುಮಾರು 12 ಗ್ರಾಂ ತೂಕದ ಸಾದಾ ಚಿನ್ನದ ಚೈನ್ ಕಿತ್ತುಕೊಂಡು, ಕಾರಿನ ಡ್ಯಾಶ್ ಬೋರ್ಡ್ ನಲ್ಲಿದ್ದ ಭಾವಿ ಪತ್ನಿಗೆ ಎಂದು ಖರೀದಿಸಿ ಇಟ್ಟಿದ್ದ ಸುಮಾರು 4-5 ಗ್ರಾಂ ತೂಕದ ಗುಂಡಾದ ಒಂದು ಜೊತೆ ಓಲೆಗಳನ್ನು ದೋಚಿ, ಇನ್ನೂ ಹೆಚ್ಚಿಗೆ ಹಣ ಕೊಡು ಇಲ್ಲದಿದ್ದರೆ ಹೊಡೆಯುವುದಾಗಿ ಬೆದರಿಕೆ ಹಾಕಿ ಆತನ ಬಳಿಯಿದ್ದ ಮೊಬೈಲ್ ನ್ನು ತೆಗೆದುಕೊಂಡು ಅದರ ಪಾಸ್ ವರ್ಡ್ ನ್ನು ದೂರುದಾರನಿಂದ ಪಡೆದುಕೊಂಡು ಮೊಬೈಲ್ ನಿಂದ ಒಂದು ಬಾರಿ ರೂ.23,000/-ರೂ. ಗಳನ್ನು ಮತ್ತೊಂದು ಬಾರಿ 1753/- ರೂ.ಗಳನ್ನು ಪೋನ್ ಪೇ ಮೂಲಕ ಒಟ್ಟು ರೂ. 24,753/-ರೂ. ಗಳನ್ನು ಅವರ ನಂಬರ್ ಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.

ಆತ ಭಯಗೊಂಡು ವಾಪಸ್ಸು ಬೆಂಗಳೂರಿಗೆ ಹೋಗಿ ಆತನ ಕುಟುಂಬದವರಿಗೆ ಕೃತ್ಯ ನಡೆದ ಬಗ್ಗೆ ಹೇಳಿ ಜೂ.8ರಂದು ದೊಡ್ಡಬಳ್ಳಾಪುರ ಠಾಣೆಗೆ ಬಂದು ದೂರು ನೀಡುದ್ದಾರೆ‌.

ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದ ತಂಡ ಆರೋಪಿಗಳನ್ನು ವಶಕ್ಕೆ ಪಡೆದು, ದೋಚಿದ್ದ ಚಿನ್ನಾಭರಣ, ನಗದು ಜಪ್ತಿ ಮಾಡಿಕೊಂಡು ದೂರುದಾರನಿಗೆ ವಾಪಸ್ ನೀಡಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ….

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

9 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

19 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

22 hours ago

Instant Play Casino

Instant play casinos allow you to play casino games online without installing any software. These…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago