ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಕಳ್ಳರ ಹಾವಳಿ ಹೆಚ್ಚಾಗಿದೆ. ಇದರಿಂದ ರೋಗಿಗಳು ಜೀವ ಭಯದಲ್ಲಿ ರಾತ್ರಿ ಕಳೆಯುವಂತಾಗಿದೆ.
ತಡರಾತ್ರಿ ಸುಮಾರು 1ಗಂಟೆ ಸಮಯದಲ್ಲಿ ಅಪರಿಚಿತನೊಬ್ಬ ತಾಯಿ ಮತ್ತು ಮಕ್ಕಳ ವಿಭಾಗಕ್ಕೆ ನುಸುಳಿ ರೋಗಿ ಸಂಬಂಧಿಕನ ಮೊಬೈಲ್ ಹಾಗೂ ಕೊರಳಲ್ಲಿದ್ದ ಸರವನ್ನ ಕದಿಯಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ರೋಗಿ ಸಂಬಂಧಿಕ ಮಲಗಿದ್ದನ್ನು ಗಮನಿಸಿದ ಕಳ್ಳ ಮೊದಲು ಕೊರಳಲ್ಲಿದ್ದ ಸರವನ್ನು ಕದಿಯಲು ಯತ್ನಿಸಿದ್ದಾನೆ. ತದನಂತರ ಜೇಬಿನಲ್ಲಿದ್ದ ಮೊಬೈಲ್ ಎಸ್ಕೇಪ್ ಮಾಡಿ ಪರಾರಿಯಾಗುವ ವೇಳೆ ರೋಗಿ ಸಂಬಂಧಿಕನಿಗೆ ಎಚ್ಚರವಾಗಿ ಎದ್ದು ನೋಡಿದಾಗ ಕಳ್ಳನ ಕೈಚಳಕ ಗೊತ್ತಾಗಿದೆ. ಕೂಡಲೇ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕಳ್ಳ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೂಡಲೇ ನನಗೆ ಎದೆ ನೋವು ಇದೆ ಎಂದು ನಾಟಕವಾಡುತ್ತಾ, ನನ್ನ ಜೇಬಿಗೆ ಇವರೇ ಮೊಬೈಲ್ ಇಟ್ಟು ನನ್ನ ಮೇಲೆ ಕಳ್ಳತನದ ಆರೋಪ ಮಾಡುತ್ತಿದ್ದಾರೆ ಎಂದು ತನ್ನ ವರಸೆ ಬದಲಾಯಿಸಿದ್ದಾನೆ ಎನ್ನಲಾಗಿದೆ.
ಕಳ್ಳನ ಈ ಕಳ್ಳಾಟಕ್ಕೆ ಹೆದರದೆ ಪೊಲೀಸರಿಗೆ ಒಪ್ಪಿಸಲಾಗಿದೆ. ನಗರ ಪೊಲೀಸರಿಂದ ತನಿಖೆ ಮುಂದುವರಿದಿದ್ದು. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…