ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಕಳ್ಳರ ಹಾವಳಿ ಹೆಚ್ಚಾಗಿದೆ. ಇದರಿಂದ ರೋಗಿಗಳು ಜೀವ ಭಯದಲ್ಲಿ ರಾತ್ರಿ ಕಳೆಯುವಂತಾಗಿದೆ.
ತಡರಾತ್ರಿ ಸುಮಾರು 1ಗಂಟೆ ಸಮಯದಲ್ಲಿ ಅಪರಿಚಿತನೊಬ್ಬ ತಾಯಿ ಮತ್ತು ಮಕ್ಕಳ ವಿಭಾಗಕ್ಕೆ ನುಸುಳಿ ರೋಗಿ ಸಂಬಂಧಿಕನ ಮೊಬೈಲ್ ಹಾಗೂ ಕೊರಳಲ್ಲಿದ್ದ ಸರವನ್ನ ಕದಿಯಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ರೋಗಿ ಸಂಬಂಧಿಕ ಮಲಗಿದ್ದನ್ನು ಗಮನಿಸಿದ ಕಳ್ಳ ಮೊದಲು ಕೊರಳಲ್ಲಿದ್ದ ಸರವನ್ನು ಕದಿಯಲು ಯತ್ನಿಸಿದ್ದಾನೆ. ತದನಂತರ ಜೇಬಿನಲ್ಲಿದ್ದ ಮೊಬೈಲ್ ಎಸ್ಕೇಪ್ ಮಾಡಿ ಪರಾರಿಯಾಗುವ ವೇಳೆ ರೋಗಿ ಸಂಬಂಧಿಕನಿಗೆ ಎಚ್ಚರವಾಗಿ ಎದ್ದು ನೋಡಿದಾಗ ಕಳ್ಳನ ಕೈಚಳಕ ಗೊತ್ತಾಗಿದೆ. ಕೂಡಲೇ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕಳ್ಳ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೂಡಲೇ ನನಗೆ ಎದೆ ನೋವು ಇದೆ ಎಂದು ನಾಟಕವಾಡುತ್ತಾ, ನನ್ನ ಜೇಬಿಗೆ ಇವರೇ ಮೊಬೈಲ್ ಇಟ್ಟು ನನ್ನ ಮೇಲೆ ಕಳ್ಳತನದ ಆರೋಪ ಮಾಡುತ್ತಿದ್ದಾರೆ ಎಂದು ತನ್ನ ವರಸೆ ಬದಲಾಯಿಸಿದ್ದಾನೆ ಎನ್ನಲಾಗಿದೆ.
ಕಳ್ಳನ ಈ ಕಳ್ಳಾಟಕ್ಕೆ ಹೆದರದೆ ಪೊಲೀಸರಿಗೆ ಒಪ್ಪಿಸಲಾಗಿದೆ. ನಗರ ಪೊಲೀಸರಿಂದ ತನಿಖೆ ಮುಂದುವರಿದಿದ್ದು. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…