ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಕಳ್ಳರ ಹಾವಳಿ ಹೆಚ್ಚಾಗಿದೆ. ಇದರಿಂದ ರೋಗಿಗಳು ಜೀವ ಭಯದಲ್ಲಿ ರಾತ್ರಿ ಕಳೆಯುವಂತಾಗಿದೆ.
ತಡರಾತ್ರಿ ಸುಮಾರು 1ಗಂಟೆ ಸಮಯದಲ್ಲಿ ಅಪರಿಚಿತನೊಬ್ಬ ತಾಯಿ ಮತ್ತು ಮಕ್ಕಳ ವಿಭಾಗಕ್ಕೆ ನುಸುಳಿ ರೋಗಿ ಸಂಬಂಧಿಕನ ಮೊಬೈಲ್ ಹಾಗೂ ಕೊರಳಲ್ಲಿದ್ದ ಸರವನ್ನ ಕದಿಯಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ರೋಗಿ ಸಂಬಂಧಿಕ ಮಲಗಿದ್ದನ್ನು ಗಮನಿಸಿದ ಕಳ್ಳ ಮೊದಲು ಕೊರಳಲ್ಲಿದ್ದ ಸರವನ್ನು ಕದಿಯಲು ಯತ್ನಿಸಿದ್ದಾನೆ. ತದನಂತರ ಜೇಬಿನಲ್ಲಿದ್ದ ಮೊಬೈಲ್ ಎಸ್ಕೇಪ್ ಮಾಡಿ ಪರಾರಿಯಾಗುವ ವೇಳೆ ರೋಗಿ ಸಂಬಂಧಿಕನಿಗೆ ಎಚ್ಚರವಾಗಿ ಎದ್ದು ನೋಡಿದಾಗ ಕಳ್ಳನ ಕೈಚಳಕ ಗೊತ್ತಾಗಿದೆ. ಕೂಡಲೇ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕಳ್ಳ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೂಡಲೇ ನನಗೆ ಎದೆ ನೋವು ಇದೆ ಎಂದು ನಾಟಕವಾಡುತ್ತಾ, ನನ್ನ ಜೇಬಿಗೆ ಇವರೇ ಮೊಬೈಲ್ ಇಟ್ಟು ನನ್ನ ಮೇಲೆ ಕಳ್ಳತನದ ಆರೋಪ ಮಾಡುತ್ತಿದ್ದಾರೆ ಎಂದು ತನ್ನ ವರಸೆ ಬದಲಾಯಿಸಿದ್ದಾನೆ ಎನ್ನಲಾಗಿದೆ.
ಕಳ್ಳನ ಈ ಕಳ್ಳಾಟಕ್ಕೆ ಹೆದರದೆ ಪೊಲೀಸರಿಗೆ ಒಪ್ಪಿಸಲಾಗಿದೆ. ನಗರ ಪೊಲೀಸರಿಂದ ತನಿಖೆ ಮುಂದುವರಿದಿದ್ದು. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…