ರಾತ್ರಿ ವೇಳೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ: ಕಳ್ಳರ ಕಾಟಕ್ಕೆ ಕಂಗೆಟ್ಟ ರೋಗಿಗಳು: ತಡರಾತ್ರಿ ಮೊಬೈಲ್ ಕಳವು ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಕಳ್ಳರ ಹಾವಳಿ ಹೆಚ್ಚಾಗಿದೆ. ಇದರಿಂದ ರೋಗಿಗಳು ಜೀವ ಭಯದಲ್ಲಿ ರಾತ್ರಿ ಕಳೆಯುವಂತಾಗಿದೆ.

ತಡರಾತ್ರಿ ಸುಮಾರು 1ಗಂಟೆ ಸಮಯದಲ್ಲಿ ಅಪರಿಚಿತನೊಬ್ಬ ತಾಯಿ ಮತ್ತು ಮಕ್ಕಳ ವಿಭಾಗಕ್ಕೆ ನುಸುಳಿ  ರೋಗಿ ಸಂಬಂಧಿಕನ ಮೊಬೈಲ್ ಹಾಗೂ ಕೊರಳಲ್ಲಿದ್ದ ಸರವನ್ನ ಕದಿಯಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ರೋಗಿ ಸಂಬಂಧಿಕ ಮಲಗಿದ್ದನ್ನು ಗಮನಿಸಿದ ಕಳ್ಳ ಮೊದಲು ಕೊರಳಲ್ಲಿದ್ದ ಸರವನ್ನು ಕದಿಯಲು ಯತ್ನಿಸಿದ್ದಾನೆ. ತದನಂತರ ಜೇಬಿನಲ್ಲಿದ್ದ ಮೊಬೈಲ್ ಎಸ್ಕೇಪ್ ಮಾಡಿ ಪರಾರಿಯಾಗುವ ವೇಳೆ ರೋಗಿ ಸಂಬಂಧಿಕನಿಗೆ ಎಚ್ಚರವಾಗಿ ಎದ್ದು ನೋಡಿದಾಗ ಕಳ್ಳನ ಕೈಚಳಕ ಗೊತ್ತಾಗಿದೆ. ಕೂಡಲೇ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕಳ್ಳ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೂಡಲೇ ನನಗೆ ಎದೆ ನೋವು ಇದೆ ಎಂದು ನಾಟಕವಾಡುತ್ತಾ, ನನ್ನ ಜೇಬಿಗೆ ಇವರೇ ಮೊಬೈಲ್ ಇಟ್ಟು ನನ್ನ ಮೇಲೆ ಕಳ್ಳತನದ ಆರೋಪ ಮಾಡುತ್ತಿದ್ದಾರೆ ಎಂದು ತನ್ನ ವರಸೆ ಬದಲಾಯಿಸಿದ್ದಾನೆ‌ ಎನ್ನಲಾಗಿದೆ.

ಕಳ್ಳನ ಈ ಕಳ್ಳಾಟಕ್ಕೆ ಹೆದರದೆ ಪೊಲೀಸರಿಗೆ ಒಪ್ಪಿಸಲಾಗಿದೆ. ನಗರ ಪೊಲೀಸರಿಂದ‌ ತನಿಖೆ‌ ಮುಂದುವರಿದಿದ್ದು. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

1 hour ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

1 hour ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

14 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago