ರಾತ್ರಿ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನು ಬೆದರಿಸಿ ಬಂಗಾರ, ನಗದು, ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದ 9 ಜನ ಆರೋಪಿಗಳನ್ನು ಗೌರಿಬಿದನೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಕಳೆದ ಪೆಬ್ರವರಿಯಲ್ಲಿ ನಗರದ ಬಸವೇಶ್ವರ ನಗರದ ಶ್ರೀನಿವಾಸ್ ಅವರ ಮನೆಗೆ ನುಗ್ಗಿದ ಸುಲಿಗೆಕೋರರು ಮನೆಯಲ್ಲಿದ್ದವರನ್ನು ಬೆದರಿಸಿ ಚಿನ್ನಾಭರಣ ಹಾಗೂ ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದು ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಅದರಂತೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಸಿಸಿ ಟಿವಿಯ ದೃಶ್ಯವಳಿಗಳನ್ನು ಆಧರಿಸಿ 9 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಚಾಂದ್ ಪಾಷ, ಸಾಬೀರ್, ಫೈರೋಜ್ ಖಾನ್, ಬಷೀರ್ ಅಹಮದ್, ಇಲಿಯಾಜ್ ಎಂಡಿ, ತನ್ವೀರ್, ಇರ್ಫಾನ್ ಪಾಷ, ಬಾಬಾಜಾನ್, ಅಮೀನ್ ಎಂದು ತಿಳಿದು ಬಂದಿದೆ.
ಇನ್ನೂ ಮನೆಯ ಮಾಲೀಕ ಕೋಟ್ಯಾಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ ಎಂದು ಮಾಹಿತಿ ಪಡೆದ ಸುಲುಗೆಕೋರರು ಫೆಬ್ರವರಿ 20 ರಂದು 3 ದ್ವಿಚಕ್ರ ವಾಹನಗಳೊಂದಿಗೆ ಮನೆಗೆ ನುಗ್ಗಿ ಬಂಗಾರ, ಹರಳು ಸೇರಿದಂತೆ ಮತ್ತಿತ್ತರು ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದರು.
ದೂರುದಾರನು ಅಕ್ರಮ ಮಾರ್ಗದಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಹಣ, ಒಡವೆಗಳು, ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಯನ್ನು ಸಂಪಾದನೆ ಮಾಡಿರುವುದಾಗಿ ವದಂತಿಯ ಮೇರೆಗೆ ಆರೋಪಿತರೆಲ್ಲರೂ ಸೇರಿಕೊಂಡು ಸಂಚನ್ನು ರೂಪಿಸಿ ಫೆ.17 ರಂದು ಸುಲಿಗೆ ಮಾಡಲು ಪ್ರಯತ್ನಪಟ್ಟಿದ್ದು, ಆದರೆ, ಆ ದಿನ ವಿಫಲರಾಗಿರುತ್ತಾರೆ. ಮತ್ತೆ ಆರೋಪಿಗಳು ಫೆ.20ರಂದು ದೂರುದಾರ ಮನೆಯಲ್ಲಿ ಇಲ್ಲದಿರುವಿಕೆಯನ್ನು ನೋಡಿಕೊಂಡು, ಮನೆಗೆ ನುಗ್ಗಿ ಆತನ ಮನೆಯಲ್ಲಿದ್ದ ಸಂಬಂಧಿಗಳನ್ನು ಬೆದರಿಸಿ ಮನೆಯಲ್ಲಿದ್ದ ಒಡವೆಗಳು, ದಾಖಲಾತಿಗಳು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.
ಆರೋಪಿಗಳು ಕೃತ್ಯಕ್ಕೆ 3 ದ್ವಿ ಚಕ್ರ ವಾಹನ, ಒಂದು ಕಾರನ್ನು ಬಳಿಸಿದ್ದು ಆರೋಪಿಗಳ ಕಡೆಯಿಂದ 1 ಉಂಗುರ, 14 ಹರಳುಗಳು, ಮತ್ತು 2 ಹವಳದ ಕಲ್ಲುಗಳನ್ನು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಈ ಪ್ರಕರಣದ ಆರೋಪಿಯಾದ ತನ್ನೀರ್ @ ಮೆಂಟಲ್ ತನು ಅವನ ಮೇಲೆ 2 ಕೊಲೆ. 2 ಕೊಲೆ ಪ್ರಯತ್ನ, 1 ದರೋಡೆಗೆ ಯತ್ನ ಒಟ್ಟು 5 ಪ್ರಕರಣಗಳು ದಾಖಲಾಗಿರುತ್ತವೆ. ಇತನ ವಿರುದ್ಧ ಡಿ.ಜೆ.ಹಳ್ಳಿ ಹಾಗೂ ಕೊಡುಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿಪಟ್ಟಿಯನ್ನು ತೆರದಿರುತ್ತಾರೆ.
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…