Categories: Crime

ರಾತ್ರಿ ವೇಳೆ ಮನೆಗೆ ನುಗ್ಗಿ ಬಂಗಾರ, ನಗದು, ದಾಖಲೆಗಳನ್ನು ಕದ್ದಿದ್ದ 9 ಮಂದಿ ಖದೀಮರ ಬಂಧನ

ರಾತ್ರಿ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನು ಬೆದರಿಸಿ ಬಂಗಾರ, ನಗದು, ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದ 9 ಜನ ಆರೋಪಿಗಳನ್ನು ಗೌರಿಬಿದನೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಕಳೆದ ಪೆಬ್ರವರಿಯಲ್ಲಿ ನಗರದ ಬಸವೇಶ್ವರ ನಗರದ ಶ್ರೀನಿವಾಸ್ ಅವರ ಮನೆಗೆ ನುಗ್ಗಿದ ಸುಲಿಗೆಕೋರರು ಮನೆಯಲ್ಲಿದ್ದವರನ್ನು ಬೆದರಿಸಿ ಚಿನ್ನಾಭರಣ ಹಾಗೂ ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದು ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಅದರಂತೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಸಿಸಿ ಟಿವಿಯ ದೃಶ್ಯವಳಿಗಳನ್ನು ಆಧರಿಸಿ 9 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಚಾಂದ್ ಪಾಷ, ಸಾಬೀರ್, ಫೈರೋಜ್ ಖಾನ್, ಬಷೀರ್ ಅಹಮದ್, ಇಲಿಯಾಜ್ ಎಂಡಿ, ತನ್ವೀರ್, ಇರ್ಫಾನ್ ಪಾಷ, ಬಾಬಾಜಾನ್, ಅಮೀನ್ ಎಂದು ತಿಳಿದು ಬಂದಿದೆ.

ಇನ್ನೂ ಮನೆಯ ಮಾಲೀಕ ಕೋಟ್ಯಾಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ ಎಂದು ಮಾಹಿತಿ ಪಡೆದ ಸುಲುಗೆಕೋರರು ಫೆಬ್ರವರಿ 20 ರಂದು 3 ದ್ವಿಚಕ್ರ ವಾಹನಗಳೊಂದಿಗೆ ಮನೆಗೆ ನುಗ್ಗಿ ಬಂಗಾರ, ಹರಳು ಸೇರಿದಂತೆ ಮತ್ತಿತ್ತರು ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದರು.

ದೂರುದಾರನು ಅಕ್ರಮ ಮಾರ್ಗದಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಹಣ, ಒಡವೆಗಳು, ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಯನ್ನು ಸಂಪಾದನೆ ಮಾಡಿರುವುದಾಗಿ ವದಂತಿಯ ಮೇರೆಗೆ ಆರೋಪಿತರೆಲ್ಲರೂ ಸೇರಿಕೊಂಡು ಸಂಚನ್ನು ರೂಪಿಸಿ ಫೆ.17 ರಂದು ಸುಲಿಗೆ ಮಾಡಲು ಪ್ರಯತ್ನಪಟ್ಟಿದ್ದು, ಆದರೆ, ಆ ದಿನ ವಿಫಲರಾಗಿರುತ್ತಾರೆ. ಮತ್ತೆ ಆರೋಪಿಗಳು ಫೆ.20ರಂದು ದೂರುದಾರ ಮನೆಯಲ್ಲಿ ಇಲ್ಲದಿರುವಿಕೆಯನ್ನು ನೋಡಿಕೊಂಡು, ಮನೆಗೆ ನುಗ್ಗಿ ಆತನ ಮನೆಯಲ್ಲಿದ್ದ ಸಂಬಂಧಿಗಳನ್ನು ಬೆದರಿಸಿ ಮನೆಯಲ್ಲಿದ್ದ ಒಡವೆಗಳು, ದಾಖಲಾತಿಗಳು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.

ಆರೋಪಿಗಳು ಕೃತ್ಯಕ್ಕೆ 3 ದ್ವಿ ಚಕ್ರ ವಾಹನ, ಒಂದು ಕಾರನ್ನು ಬಳಿಸಿದ್ದು ಆರೋಪಿಗಳ ಕಡೆಯಿಂದ 1 ಉಂಗುರ, 14 ಹರಳುಗಳು, ಮತ್ತು 2 ಹವಳದ ಕಲ್ಲುಗಳನ್ನು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಈ ಪ್ರಕರಣದ ಆರೋಪಿಯಾದ ತನ್ನೀರ್ @ ಮೆಂಟಲ್ ತನು ಅವನ ಮೇಲೆ 2 ಕೊಲೆ. 2 ಕೊಲೆ ಪ್ರಯತ್ನ, 1 ದರೋಡೆಗೆ ಯತ್ನ ಒಟ್ಟು 5 ಪ್ರಕರಣಗಳು ದಾಖಲಾಗಿರುತ್ತವೆ. ಇತನ ವಿರುದ್ಧ ಡಿ.ಜೆ.ಹಳ್ಳಿ ಹಾಗೂ ಕೊಡುಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿಪಟ್ಟಿಯನ್ನು ತೆರದಿರುತ್ತಾರೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

12 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

23 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago