Categories: Crime

ರಾತ್ರಿ ವೇಳೆ ಮನೆಗೆ ನುಗ್ಗಿ ಬಂಗಾರ, ನಗದು, ದಾಖಲೆಗಳನ್ನು ಕದ್ದಿದ್ದ 9 ಮಂದಿ ಖದೀಮರ ಬಂಧನ

ರಾತ್ರಿ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನು ಬೆದರಿಸಿ ಬಂಗಾರ, ನಗದು, ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದ 9 ಜನ ಆರೋಪಿಗಳನ್ನು ಗೌರಿಬಿದನೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಕಳೆದ ಪೆಬ್ರವರಿಯಲ್ಲಿ ನಗರದ ಬಸವೇಶ್ವರ ನಗರದ ಶ್ರೀನಿವಾಸ್ ಅವರ ಮನೆಗೆ ನುಗ್ಗಿದ ಸುಲಿಗೆಕೋರರು ಮನೆಯಲ್ಲಿದ್ದವರನ್ನು ಬೆದರಿಸಿ ಚಿನ್ನಾಭರಣ ಹಾಗೂ ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದು ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಅದರಂತೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಸಿಸಿ ಟಿವಿಯ ದೃಶ್ಯವಳಿಗಳನ್ನು ಆಧರಿಸಿ 9 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಚಾಂದ್ ಪಾಷ, ಸಾಬೀರ್, ಫೈರೋಜ್ ಖಾನ್, ಬಷೀರ್ ಅಹಮದ್, ಇಲಿಯಾಜ್ ಎಂಡಿ, ತನ್ವೀರ್, ಇರ್ಫಾನ್ ಪಾಷ, ಬಾಬಾಜಾನ್, ಅಮೀನ್ ಎಂದು ತಿಳಿದು ಬಂದಿದೆ.

ಇನ್ನೂ ಮನೆಯ ಮಾಲೀಕ ಕೋಟ್ಯಾಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ ಎಂದು ಮಾಹಿತಿ ಪಡೆದ ಸುಲುಗೆಕೋರರು ಫೆಬ್ರವರಿ 20 ರಂದು 3 ದ್ವಿಚಕ್ರ ವಾಹನಗಳೊಂದಿಗೆ ಮನೆಗೆ ನುಗ್ಗಿ ಬಂಗಾರ, ಹರಳು ಸೇರಿದಂತೆ ಮತ್ತಿತ್ತರು ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದರು.

ದೂರುದಾರನು ಅಕ್ರಮ ಮಾರ್ಗದಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಹಣ, ಒಡವೆಗಳು, ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಯನ್ನು ಸಂಪಾದನೆ ಮಾಡಿರುವುದಾಗಿ ವದಂತಿಯ ಮೇರೆಗೆ ಆರೋಪಿತರೆಲ್ಲರೂ ಸೇರಿಕೊಂಡು ಸಂಚನ್ನು ರೂಪಿಸಿ ಫೆ.17 ರಂದು ಸುಲಿಗೆ ಮಾಡಲು ಪ್ರಯತ್ನಪಟ್ಟಿದ್ದು, ಆದರೆ, ಆ ದಿನ ವಿಫಲರಾಗಿರುತ್ತಾರೆ. ಮತ್ತೆ ಆರೋಪಿಗಳು ಫೆ.20ರಂದು ದೂರುದಾರ ಮನೆಯಲ್ಲಿ ಇಲ್ಲದಿರುವಿಕೆಯನ್ನು ನೋಡಿಕೊಂಡು, ಮನೆಗೆ ನುಗ್ಗಿ ಆತನ ಮನೆಯಲ್ಲಿದ್ದ ಸಂಬಂಧಿಗಳನ್ನು ಬೆದರಿಸಿ ಮನೆಯಲ್ಲಿದ್ದ ಒಡವೆಗಳು, ದಾಖಲಾತಿಗಳು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.

ಆರೋಪಿಗಳು ಕೃತ್ಯಕ್ಕೆ 3 ದ್ವಿ ಚಕ್ರ ವಾಹನ, ಒಂದು ಕಾರನ್ನು ಬಳಿಸಿದ್ದು ಆರೋಪಿಗಳ ಕಡೆಯಿಂದ 1 ಉಂಗುರ, 14 ಹರಳುಗಳು, ಮತ್ತು 2 ಹವಳದ ಕಲ್ಲುಗಳನ್ನು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಈ ಪ್ರಕರಣದ ಆರೋಪಿಯಾದ ತನ್ನೀರ್ @ ಮೆಂಟಲ್ ತನು ಅವನ ಮೇಲೆ 2 ಕೊಲೆ. 2 ಕೊಲೆ ಪ್ರಯತ್ನ, 1 ದರೋಡೆಗೆ ಯತ್ನ ಒಟ್ಟು 5 ಪ್ರಕರಣಗಳು ದಾಖಲಾಗಿರುತ್ತವೆ. ಇತನ ವಿರುದ್ಧ ಡಿ.ಜೆ.ಹಳ್ಳಿ ಹಾಗೂ ಕೊಡುಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿಪಟ್ಟಿಯನ್ನು ತೆರದಿರುತ್ತಾರೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

5 minutes ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

13 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

13 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

16 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

16 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

21 hours ago