Categories: Crime

ರಾತ್ರಿ ವೇಳೆ ಮನೆಗೆ ನುಗ್ಗಿ ಬಂಗಾರ, ನಗದು, ದಾಖಲೆಗಳನ್ನು ಕದ್ದಿದ್ದ 9 ಮಂದಿ ಖದೀಮರ ಬಂಧನ

ರಾತ್ರಿ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನು ಬೆದರಿಸಿ ಬಂಗಾರ, ನಗದು, ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದ 9 ಜನ ಆರೋಪಿಗಳನ್ನು ಗೌರಿಬಿದನೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಕಳೆದ ಪೆಬ್ರವರಿಯಲ್ಲಿ ನಗರದ ಬಸವೇಶ್ವರ ನಗರದ ಶ್ರೀನಿವಾಸ್ ಅವರ ಮನೆಗೆ ನುಗ್ಗಿದ ಸುಲಿಗೆಕೋರರು ಮನೆಯಲ್ಲಿದ್ದವರನ್ನು ಬೆದರಿಸಿ ಚಿನ್ನಾಭರಣ ಹಾಗೂ ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದು ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಅದರಂತೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಸಿಸಿ ಟಿವಿಯ ದೃಶ್ಯವಳಿಗಳನ್ನು ಆಧರಿಸಿ 9 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಚಾಂದ್ ಪಾಷ, ಸಾಬೀರ್, ಫೈರೋಜ್ ಖಾನ್, ಬಷೀರ್ ಅಹಮದ್, ಇಲಿಯಾಜ್ ಎಂಡಿ, ತನ್ವೀರ್, ಇರ್ಫಾನ್ ಪಾಷ, ಬಾಬಾಜಾನ್, ಅಮೀನ್ ಎಂದು ತಿಳಿದು ಬಂದಿದೆ.

ಇನ್ನೂ ಮನೆಯ ಮಾಲೀಕ ಕೋಟ್ಯಾಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ ಎಂದು ಮಾಹಿತಿ ಪಡೆದ ಸುಲುಗೆಕೋರರು ಫೆಬ್ರವರಿ 20 ರಂದು 3 ದ್ವಿಚಕ್ರ ವಾಹನಗಳೊಂದಿಗೆ ಮನೆಗೆ ನುಗ್ಗಿ ಬಂಗಾರ, ಹರಳು ಸೇರಿದಂತೆ ಮತ್ತಿತ್ತರು ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದರು.

ದೂರುದಾರನು ಅಕ್ರಮ ಮಾರ್ಗದಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಹಣ, ಒಡವೆಗಳು, ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಯನ್ನು ಸಂಪಾದನೆ ಮಾಡಿರುವುದಾಗಿ ವದಂತಿಯ ಮೇರೆಗೆ ಆರೋಪಿತರೆಲ್ಲರೂ ಸೇರಿಕೊಂಡು ಸಂಚನ್ನು ರೂಪಿಸಿ ಫೆ.17 ರಂದು ಸುಲಿಗೆ ಮಾಡಲು ಪ್ರಯತ್ನಪಟ್ಟಿದ್ದು, ಆದರೆ, ಆ ದಿನ ವಿಫಲರಾಗಿರುತ್ತಾರೆ. ಮತ್ತೆ ಆರೋಪಿಗಳು ಫೆ.20ರಂದು ದೂರುದಾರ ಮನೆಯಲ್ಲಿ ಇಲ್ಲದಿರುವಿಕೆಯನ್ನು ನೋಡಿಕೊಂಡು, ಮನೆಗೆ ನುಗ್ಗಿ ಆತನ ಮನೆಯಲ್ಲಿದ್ದ ಸಂಬಂಧಿಗಳನ್ನು ಬೆದರಿಸಿ ಮನೆಯಲ್ಲಿದ್ದ ಒಡವೆಗಳು, ದಾಖಲಾತಿಗಳು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.

ಆರೋಪಿಗಳು ಕೃತ್ಯಕ್ಕೆ 3 ದ್ವಿ ಚಕ್ರ ವಾಹನ, ಒಂದು ಕಾರನ್ನು ಬಳಿಸಿದ್ದು ಆರೋಪಿಗಳ ಕಡೆಯಿಂದ 1 ಉಂಗುರ, 14 ಹರಳುಗಳು, ಮತ್ತು 2 ಹವಳದ ಕಲ್ಲುಗಳನ್ನು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಈ ಪ್ರಕರಣದ ಆರೋಪಿಯಾದ ತನ್ನೀರ್ @ ಮೆಂಟಲ್ ತನು ಅವನ ಮೇಲೆ 2 ಕೊಲೆ. 2 ಕೊಲೆ ಪ್ರಯತ್ನ, 1 ದರೋಡೆಗೆ ಯತ್ನ ಒಟ್ಟು 5 ಪ್ರಕರಣಗಳು ದಾಖಲಾಗಿರುತ್ತವೆ. ಇತನ ವಿರುದ್ಧ ಡಿ.ಜೆ.ಹಳ್ಳಿ ಹಾಗೂ ಕೊಡುಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿಪಟ್ಟಿಯನ್ನು ತೆರದಿರುತ್ತಾರೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 hour ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago