ರಾತ್ರಿ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನು ಬೆದರಿಸಿ ಬಂಗಾರ, ನಗದು, ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದ 9 ಜನ ಆರೋಪಿಗಳನ್ನು ಗೌರಿಬಿದನೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಕಳೆದ ಪೆಬ್ರವರಿಯಲ್ಲಿ ನಗರದ ಬಸವೇಶ್ವರ ನಗರದ ಶ್ರೀನಿವಾಸ್ ಅವರ ಮನೆಗೆ ನುಗ್ಗಿದ ಸುಲಿಗೆಕೋರರು ಮನೆಯಲ್ಲಿದ್ದವರನ್ನು ಬೆದರಿಸಿ ಚಿನ್ನಾಭರಣ ಹಾಗೂ ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದು ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಅದರಂತೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಸಿಸಿ ಟಿವಿಯ ದೃಶ್ಯವಳಿಗಳನ್ನು ಆಧರಿಸಿ 9 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಚಾಂದ್ ಪಾಷ, ಸಾಬೀರ್, ಫೈರೋಜ್ ಖಾನ್, ಬಷೀರ್ ಅಹಮದ್, ಇಲಿಯಾಜ್ ಎಂಡಿ, ತನ್ವೀರ್, ಇರ್ಫಾನ್ ಪಾಷ, ಬಾಬಾಜಾನ್, ಅಮೀನ್ ಎಂದು ತಿಳಿದು ಬಂದಿದೆ.
ಇನ್ನೂ ಮನೆಯ ಮಾಲೀಕ ಕೋಟ್ಯಾಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ ಎಂದು ಮಾಹಿತಿ ಪಡೆದ ಸುಲುಗೆಕೋರರು ಫೆಬ್ರವರಿ 20 ರಂದು 3 ದ್ವಿಚಕ್ರ ವಾಹನಗಳೊಂದಿಗೆ ಮನೆಗೆ ನುಗ್ಗಿ ಬಂಗಾರ, ಹರಳು ಸೇರಿದಂತೆ ಮತ್ತಿತ್ತರು ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದರು.
ದೂರುದಾರನು ಅಕ್ರಮ ಮಾರ್ಗದಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಹಣ, ಒಡವೆಗಳು, ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಯನ್ನು ಸಂಪಾದನೆ ಮಾಡಿರುವುದಾಗಿ ವದಂತಿಯ ಮೇರೆಗೆ ಆರೋಪಿತರೆಲ್ಲರೂ ಸೇರಿಕೊಂಡು ಸಂಚನ್ನು ರೂಪಿಸಿ ಫೆ.17 ರಂದು ಸುಲಿಗೆ ಮಾಡಲು ಪ್ರಯತ್ನಪಟ್ಟಿದ್ದು, ಆದರೆ, ಆ ದಿನ ವಿಫಲರಾಗಿರುತ್ತಾರೆ. ಮತ್ತೆ ಆರೋಪಿಗಳು ಫೆ.20ರಂದು ದೂರುದಾರ ಮನೆಯಲ್ಲಿ ಇಲ್ಲದಿರುವಿಕೆಯನ್ನು ನೋಡಿಕೊಂಡು, ಮನೆಗೆ ನುಗ್ಗಿ ಆತನ ಮನೆಯಲ್ಲಿದ್ದ ಸಂಬಂಧಿಗಳನ್ನು ಬೆದರಿಸಿ ಮನೆಯಲ್ಲಿದ್ದ ಒಡವೆಗಳು, ದಾಖಲಾತಿಗಳು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.
ಆರೋಪಿಗಳು ಕೃತ್ಯಕ್ಕೆ 3 ದ್ವಿ ಚಕ್ರ ವಾಹನ, ಒಂದು ಕಾರನ್ನು ಬಳಿಸಿದ್ದು ಆರೋಪಿಗಳ ಕಡೆಯಿಂದ 1 ಉಂಗುರ, 14 ಹರಳುಗಳು, ಮತ್ತು 2 ಹವಳದ ಕಲ್ಲುಗಳನ್ನು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಈ ಪ್ರಕರಣದ ಆರೋಪಿಯಾದ ತನ್ನೀರ್ @ ಮೆಂಟಲ್ ತನು ಅವನ ಮೇಲೆ 2 ಕೊಲೆ. 2 ಕೊಲೆ ಪ್ರಯತ್ನ, 1 ದರೋಡೆಗೆ ಯತ್ನ ಒಟ್ಟು 5 ಪ್ರಕರಣಗಳು ದಾಖಲಾಗಿರುತ್ತವೆ. ಇತನ ವಿರುದ್ಧ ಡಿ.ಜೆ.ಹಳ್ಳಿ ಹಾಗೂ ಕೊಡುಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿಪಟ್ಟಿಯನ್ನು ತೆರದಿರುತ್ತಾರೆ.
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…