Categories: Crime

ರಾತ್ರಿ ವೇಳೆ ಮನೆಗೆ ನುಗ್ಗಿ ಬಂಗಾರ, ನಗದು, ದಾಖಲೆಗಳನ್ನು ಕದ್ದಿದ್ದ 9 ಮಂದಿ ಖದೀಮರ ಬಂಧನ

ರಾತ್ರಿ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನು ಬೆದರಿಸಿ ಬಂಗಾರ, ನಗದು, ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದ 9 ಜನ ಆರೋಪಿಗಳನ್ನು ಗೌರಿಬಿದನೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಕಳೆದ ಪೆಬ್ರವರಿಯಲ್ಲಿ ನಗರದ ಬಸವೇಶ್ವರ ನಗರದ ಶ್ರೀನಿವಾಸ್ ಅವರ ಮನೆಗೆ ನುಗ್ಗಿದ ಸುಲಿಗೆಕೋರರು ಮನೆಯಲ್ಲಿದ್ದವರನ್ನು ಬೆದರಿಸಿ ಚಿನ್ನಾಭರಣ ಹಾಗೂ ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದು ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಅದರಂತೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಸಿಸಿ ಟಿವಿಯ ದೃಶ್ಯವಳಿಗಳನ್ನು ಆಧರಿಸಿ 9 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಚಾಂದ್ ಪಾಷ, ಸಾಬೀರ್, ಫೈರೋಜ್ ಖಾನ್, ಬಷೀರ್ ಅಹಮದ್, ಇಲಿಯಾಜ್ ಎಂಡಿ, ತನ್ವೀರ್, ಇರ್ಫಾನ್ ಪಾಷ, ಬಾಬಾಜಾನ್, ಅಮೀನ್ ಎಂದು ತಿಳಿದು ಬಂದಿದೆ.

ಇನ್ನೂ ಮನೆಯ ಮಾಲೀಕ ಕೋಟ್ಯಾಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ ಎಂದು ಮಾಹಿತಿ ಪಡೆದ ಸುಲುಗೆಕೋರರು ಫೆಬ್ರವರಿ 20 ರಂದು 3 ದ್ವಿಚಕ್ರ ವಾಹನಗಳೊಂದಿಗೆ ಮನೆಗೆ ನುಗ್ಗಿ ಬಂಗಾರ, ಹರಳು ಸೇರಿದಂತೆ ಮತ್ತಿತ್ತರು ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದರು.

ದೂರುದಾರನು ಅಕ್ರಮ ಮಾರ್ಗದಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಹಣ, ಒಡವೆಗಳು, ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಯನ್ನು ಸಂಪಾದನೆ ಮಾಡಿರುವುದಾಗಿ ವದಂತಿಯ ಮೇರೆಗೆ ಆರೋಪಿತರೆಲ್ಲರೂ ಸೇರಿಕೊಂಡು ಸಂಚನ್ನು ರೂಪಿಸಿ ಫೆ.17 ರಂದು ಸುಲಿಗೆ ಮಾಡಲು ಪ್ರಯತ್ನಪಟ್ಟಿದ್ದು, ಆದರೆ, ಆ ದಿನ ವಿಫಲರಾಗಿರುತ್ತಾರೆ. ಮತ್ತೆ ಆರೋಪಿಗಳು ಫೆ.20ರಂದು ದೂರುದಾರ ಮನೆಯಲ್ಲಿ ಇಲ್ಲದಿರುವಿಕೆಯನ್ನು ನೋಡಿಕೊಂಡು, ಮನೆಗೆ ನುಗ್ಗಿ ಆತನ ಮನೆಯಲ್ಲಿದ್ದ ಸಂಬಂಧಿಗಳನ್ನು ಬೆದರಿಸಿ ಮನೆಯಲ್ಲಿದ್ದ ಒಡವೆಗಳು, ದಾಖಲಾತಿಗಳು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.

ಆರೋಪಿಗಳು ಕೃತ್ಯಕ್ಕೆ 3 ದ್ವಿ ಚಕ್ರ ವಾಹನ, ಒಂದು ಕಾರನ್ನು ಬಳಿಸಿದ್ದು ಆರೋಪಿಗಳ ಕಡೆಯಿಂದ 1 ಉಂಗುರ, 14 ಹರಳುಗಳು, ಮತ್ತು 2 ಹವಳದ ಕಲ್ಲುಗಳನ್ನು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಈ ಪ್ರಕರಣದ ಆರೋಪಿಯಾದ ತನ್ನೀರ್ @ ಮೆಂಟಲ್ ತನು ಅವನ ಮೇಲೆ 2 ಕೊಲೆ. 2 ಕೊಲೆ ಪ್ರಯತ್ನ, 1 ದರೋಡೆಗೆ ಯತ್ನ ಒಟ್ಟು 5 ಪ್ರಕರಣಗಳು ದಾಖಲಾಗಿರುತ್ತವೆ. ಇತನ ವಿರುದ್ಧ ಡಿ.ಜೆ.ಹಳ್ಳಿ ಹಾಗೂ ಕೊಡುಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿಪಟ್ಟಿಯನ್ನು ತೆರದಿರುತ್ತಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

20 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago