ಫೆ.23ರಂದು ರಾತ್ರಿ ಸುಮಾರು 8-30 ಗಂಟೆಯಲ್ಲಿ ತುಮಕೂರಿನ ತಿಲಕ್ಪಾರ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಸಂದ್ರ ರಸ್ತೆಯಲ್ಲಿ ಯಾರೋ ಕೆಲವು ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ರಸ್ತೆಯಲ್ಲಿ ಬರುವ ಜನರನ್ನು ಅಡ್ಡಗಟ್ಟುತ್ತಿದ್ದಾರೆಂದು ತಿಲಕ್ಪಾರ್ಕ್ ಪೊಲೀಸ್ ಠಾಣಾ ಪಿ.ಎಸ್.ಐ ರವರಿಗೆ ಬಂದ ಮಾಹಿತಿ ಮೇರೆಗೆ ತತಕ್ಷಣ ಸ್ಥಳಕ್ಕೆ ಹೋಗಿ ಅವರನ್ನೆಲ್ಲಾ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿದಾಗ ಆರೋಪಿತರು ಈ ಹಿಂದೆ ಫೆ.19ರಂದು ರಾತ್ರಿ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಣಿಗಲ್ ಜಂಕ್ಷನ್ ಬಳಿ ರಿಂಗ್ ರಸ್ತೆಯಲ್ಲಿ ಲಾರಿಯನ್ನು ನಿಲ್ಲಿಸಿಕೊಂಡು ಮಲಗಿದ್ದ ಚಾಲಕನಿಗೆ ಚಾಕುವಿನಿಂದ ತಿವಿದು ಆತನ ಬಳಿ ಇದ್ದ ವಡವೆ, ನಗದು ಹಣ ಮತ್ತು ಮೊಬೈಲ್ ಗಳನ್ನು ಸುಲಿಗೆ ಮಾಡಿರುವುದಾಗಿ ಹಾಗೂ ಫೆ.17ರಂದು ತಿಲಕ್ ಪಾರ್ಕ ಪೊಲೀಸ್ ಠಾಣೆಯ ವ್ಯಾಪ್ತಿಯ ಗೋವಿಂದನಗರದಲ್ಲಿ ಹೊಸದಾಗಿ ರೈಲ್ವೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮೊಬೈಲ್ ಫೋನ್ಗಳನ್ನು ರೈಲ್ವೆ ಕಾಮಗಾರಿಯ ಉಪಕರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ವಿಚಾರಣೆಯಿಂದ ತಿಳಿದು ಬಂದಿರುತ್ತದೆ.
ಆರೋಪಿಗಳ ಹೆಸರು
1. ಫಯಾಜ್
2. ಮಂಜುನಾಥ @ ಮಂಜ
3. ಅಪ್ರೋಸ್ ಪಾಷ @ ಅಪ್ರೋಸ್
4. ಸುಹೇಲ್ ಪಾಷ @ ವೇಲು
5. ಖಾದರ್
ಈ ಮೇಲ್ಕಂಡ ಆರೋಪಿತರವರುಗಳಿಂದ 1,20,000/- ರೂ ಬೆಲೆಬಾಳುವ ರೈಲ್ವೆ ಟ್ರ್ಯಾಕ್ ಕಾಮಗಾರಿ ಉಪಕರಣಗಳು. 1,39,600/- ರೂ. ಬೆಲೆಬಾಳುವ 17 ಗ್ರಾಂ 450 ಮಿಲಿ ತೂಕದ ಚಿನ್ನದ ಕೊರಳ ಚೈನು, 2,500/- ರೂಪಾಯಿ ಬೆಲೆಬಾಳುವ 28 ಗ್ರಾಂ 870 ಮಿಲಿ ತೂಕದ ಬೆಳ್ಳಿಯ ಕೈ ಕಡಗ, 3000/- ಬೆಬೆ ಬಾಳುವ ಒಂದು ಕೈಗಡಿಯಾರ ಹಾಗೂ 30,000/- ರೂ ಬೆಲೆ ಬಾಳುವ 6 ಮೊಬೈಲ್ ಪೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…