ಫೆ.23ರಂದು ರಾತ್ರಿ ಸುಮಾರು 8-30 ಗಂಟೆಯಲ್ಲಿ ತುಮಕೂರಿನ ತಿಲಕ್ಪಾರ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಸಂದ್ರ ರಸ್ತೆಯಲ್ಲಿ ಯಾರೋ ಕೆಲವು ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ರಸ್ತೆಯಲ್ಲಿ ಬರುವ ಜನರನ್ನು ಅಡ್ಡಗಟ್ಟುತ್ತಿದ್ದಾರೆಂದು ತಿಲಕ್ಪಾರ್ಕ್ ಪೊಲೀಸ್ ಠಾಣಾ ಪಿ.ಎಸ್.ಐ ರವರಿಗೆ ಬಂದ ಮಾಹಿತಿ ಮೇರೆಗೆ ತತಕ್ಷಣ ಸ್ಥಳಕ್ಕೆ ಹೋಗಿ ಅವರನ್ನೆಲ್ಲಾ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿದಾಗ ಆರೋಪಿತರು ಈ ಹಿಂದೆ ಫೆ.19ರಂದು ರಾತ್ರಿ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಣಿಗಲ್ ಜಂಕ್ಷನ್ ಬಳಿ ರಿಂಗ್ ರಸ್ತೆಯಲ್ಲಿ ಲಾರಿಯನ್ನು ನಿಲ್ಲಿಸಿಕೊಂಡು ಮಲಗಿದ್ದ ಚಾಲಕನಿಗೆ ಚಾಕುವಿನಿಂದ ತಿವಿದು ಆತನ ಬಳಿ ಇದ್ದ ವಡವೆ, ನಗದು ಹಣ ಮತ್ತು ಮೊಬೈಲ್ ಗಳನ್ನು ಸುಲಿಗೆ ಮಾಡಿರುವುದಾಗಿ ಹಾಗೂ ಫೆ.17ರಂದು ತಿಲಕ್ ಪಾರ್ಕ ಪೊಲೀಸ್ ಠಾಣೆಯ ವ್ಯಾಪ್ತಿಯ ಗೋವಿಂದನಗರದಲ್ಲಿ ಹೊಸದಾಗಿ ರೈಲ್ವೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮೊಬೈಲ್ ಫೋನ್ಗಳನ್ನು ರೈಲ್ವೆ ಕಾಮಗಾರಿಯ ಉಪಕರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ವಿಚಾರಣೆಯಿಂದ ತಿಳಿದು ಬಂದಿರುತ್ತದೆ.
ಆರೋಪಿಗಳ ಹೆಸರು
1. ಫಯಾಜ್
2. ಮಂಜುನಾಥ @ ಮಂಜ
3. ಅಪ್ರೋಸ್ ಪಾಷ @ ಅಪ್ರೋಸ್
4. ಸುಹೇಲ್ ಪಾಷ @ ವೇಲು
5. ಖಾದರ್
ಈ ಮೇಲ್ಕಂಡ ಆರೋಪಿತರವರುಗಳಿಂದ 1,20,000/- ರೂ ಬೆಲೆಬಾಳುವ ರೈಲ್ವೆ ಟ್ರ್ಯಾಕ್ ಕಾಮಗಾರಿ ಉಪಕರಣಗಳು. 1,39,600/- ರೂ. ಬೆಲೆಬಾಳುವ 17 ಗ್ರಾಂ 450 ಮಿಲಿ ತೂಕದ ಚಿನ್ನದ ಕೊರಳ ಚೈನು, 2,500/- ರೂಪಾಯಿ ಬೆಲೆಬಾಳುವ 28 ಗ್ರಾಂ 870 ಮಿಲಿ ತೂಕದ ಬೆಳ್ಳಿಯ ಕೈ ಕಡಗ, 3000/- ಬೆಬೆ ಬಾಳುವ ಒಂದು ಕೈಗಡಿಯಾರ ಹಾಗೂ 30,000/- ರೂ ಬೆಲೆ ಬಾಳುವ 6 ಮೊಬೈಲ್ ಪೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…